ಬಾಗಲಕೋಟೆ: ಪ್ರತಿಭಟನೆ ವೇಳೆ 'ಅಂಧಾಭಿಮಾನ'; ಬೆಂಕಿ ಹಚ್ಚಿಕೊಳ್ಳಲು ಸಿದ್ದು ಬೆಂಬಲಿಗ ಯತ್ನ

ಗಾಯಾಳುಗಳನ್ನು ಗುಳೇದಗುಡ್ಡ ಬಳಿಯ ನಾಗರಾಲ್ ನಿವಾಸಿ ದ್ಯಾವಪ್ಪ ಮಾಗಿ ಮತ್ತು ಬಿಳಗಿ ತಾಲೂಕಿನ ಗಿರಿಸಾಗರದ ಹನುಮಂತ್ ಎಂದು ಗುರುತಿಸಲಾಗಿದೆ.
ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿ ಗಾಯಗೊಂಡ ದ್ಯಾವಪ್ಪ ಮಾಗಿ
ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿ ಗಾಯಗೊಂಡ ದ್ಯಾವಪ್ಪ ಮಾಗಿ
Updated on

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಧಾಭಿಮಾನಿಯೋರ್ವ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿ ಗಾಯಗೊಂಡಿರುವ ಘಟನೆ ಬಾಗಲಕೋಟೆಯಲ್ಲಿ ಸೋಮವಾರ ನಡೆದಿದೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸೋಮವಾರ ಆಯೋಜಿಸಿದ್ದ ಪ್ರತಿಭಟನೆ ವೇಳೆಯಲ್ಲಿ ಈ ಘಟನೆ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾಕಾರರು ಟೈರ್ ಗಳಿಗೆ ಬೆಂಕಿ ಹಚ್ಚಿ, ಕೇಂದ್ರೀಯ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಪೆಟ್ರೋಲ್ ಕ್ಯಾನ್ ವೊಂದನ್ನು ತೆಗೆದುಕೊಂಡ ಸಿದ್ದರಾಮಯ್ಯ ಬೆಂಬಲಿಗ, ತನ್ನ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ. ಇದರಿಂದ ಅಲ್ಲಿಯೇ ಇದ್ದ ಇತರ ಪ್ರತಿಭಟನಾಕಾರನಿಗೂ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿದ್ದ ಪೊಲೀಸರು ಹಾಗೂ ಪ್ರತ್ಯಕ್ಷದರ್ಶಿಗಳು ಮಧ್ಯಪ್ರವೇಶಿಸಿ ಇಬ್ಬರನ್ನು ಬೆಂಕಿಯಿಂದ ರಕ್ಷಿಸಿದ್ದಾರೆ. ಗಾಯಾಳುಗಳನ್ನು ಗುಳೇದಗುಡ್ಡ ಬಳಿಯ ನಾಗರಾಲ್ ನಿವಾಸಿ ದ್ಯಾವಪ್ಪ ಮಾಗಿ ಮತ್ತು ಬಿಳಗಿ ತಾಲೂಕಿನ ಗಿರಿಸಾಗರದ ಹನುಮಂತ್ ಎಂದು ಗುರುತಿಸಲಾಗಿದೆ. ಮಾಗಿ ಅವರ ಹಣೆ, ಮುಖ, ಕುತ್ತಿಗೆ, ಎದೆ ಮತ್ತು ಬೆನ್ನಿನ ಹಿಂಭಾಗ ಸೇರಿದಂತೆ ಜಾಸ್ತಿ ಪ್ರಮಾಣದಲ್ಲಿ ಗಾಯವಾಗಿದೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪರಿಸ್ಥಿತಿ ಸದ್ಯ ಸ್ಥಿರವಾಗಿರುವುದಾಗಿ ವರದಿಯಾಗಿದೆ.

ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿ ಗಾಯಗೊಂಡ ದ್ಯಾವಪ್ಪ ಮಾಗಿ
Muda scam: ಪ್ರಾಸಿಕ್ಯೂಶನ್ ಗೆ ಅನುಮತಿ; ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com