ಝೀಕಾ ಬೆನ್ನಲ್ಲೇ ಈಗ Mpox ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸನ್ನದ್ಧ ಎಂದ ಸಚಿವ

ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು.
ಸಚಿವ ದಿನೇಶ್ ಗುಂಡೂರಾವ್
ಸಚಿವ ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಝೀಕಾ ವೈರಲ್ ಬೆನ್ನಲ್ಲೇ ರಾಜ್ಯದಲ್ಲಿ ಮಂಕಿ ಪಾಕ್ಸ್ ಆತಂಕ ಶುರುವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದ್ದಾರೆ.

ಹೊರದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾದ ಕಾರಣದಿಂದ ಆರೋಗ್ಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿ, ಮುಂಜಾಗೃತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಬೇಕು. ಮಂಕಿಪಾಕ್ಸ್ ವೈರಾಣು ಗುಣಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವ ದಿನೇಶ್ ಗುಂಡೂರಾವ್
ದೆಹಲಿಯಲ್ಲಿ 31 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್​​​​: ಟ್ರಾವೆಲ್​​ ಹಿಸ್ಟರಿ ಇಲ್ಲದಿದ್ರೂ ಸೋಂಕು ಪತ್ತೆ, ಭಾರತದಲ್ಲಿ ನಾಲ್ಕನೇ ಪ್ರಕರಣ!

ರಾಜ್ಯದಲ್ಲಿ ಒಂಬತ್ತು ಝೀಕಾ ಪ್ರಕರಣಗಳು ಪತ್ತೆಯಾಗಿದ್ದು, ಶಿವಮೊಗ್ಗದಲ್ಲಿ ಮೂರು ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಮಂದಿಗೆ ಝೀಕಾ ವೈರಾಣು ಸೋಂಕು ದೃಢಪಟ್ಟಿದೆ. ಈ ಪೈಕಿ 5 ಮಹಿಳೆಯರಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com