ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ KARD ಮುಷ್ಕರ ಅಂತ್ಯ

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.
ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು (ಕೆಎಆರ್‌ಡಿ) ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡಿದೆ.

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.

ಬುಧವಾರ ಬಾಗಲಕೋಟೆಗೆ ತೆರಳುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂನಲ್ಲಿ ತಮ್ಮ ನಿವಾಸದಲ್ಲಿ ಕೆಎಆರ್‌ಡಿ ಸದಸ್ಯರನ್ನು ಭೇಟಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
ದೇಶಾದ್ಯಂತ ಇಂದು ವೈದ್ಯರ ಪ್ರತಿಭಟನೆ-ಮುಷ್ಕರ: ಯಾವ ಸೇವೆಗಳು ಲಭ್ಯ, ಯಾವುದು ಇಲ್ಲ ಇಲ್ಲಿದೆ ಮಾಹಿತಿ...

ಈ ವೈದ್ಯರು, ವಾರಕ್ಕೆ 70-80 ಗಂಟೆಗಳ ಕಾಲ ಕೆಲಸ ಮಾಡಿದರೂ ನಮ್ಮಗಳಿಕೆ ಕಡಿಮೆಯಿದೆ ಎಂದು ಅಳಲು ತೋಡಿಕೊಂಡರು. ಶಿಷ್ಯವೇತನ ಹೆಚ್ಚಳಕ್ಕೆ ಮನವ ಮಾಡಿಕೊಂಡರು.

ಮಾತುಕತೆ ಬಳಿಕ ಮುಖ್ಯಮಂತ್ರಿಗಳು ಸ್ನಾತಕೋತ್ತರ ಪದವೀಧರರು ಮತ್ತು ಸೂಪರ್-ಸ್ಪೆಷಾಲಿಟಿ ನಿವಾಸಿ ವೈದ್ಯರಿಗೆ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳಿಂದ ಇನ್ನೂ ಅಧಿಕೃತ ಆದೇಶಗಳು ಬಂದಲ್ಲ. ಆದರೆ, ಭರವಸೆ ಬೆನ್ನಲ್ಲೇ ಮುಷ್ಕರ ವಾಪಸ್ ಪಡೆಯಲಾಗಿದೆ. ಇಂದಿನಿಂದ ಕೆಎಆರ್‌ಡಿ ಸದಸ್ಯರು ತಮ್ಮ ತಮ್ಮ ಸೇವೆಗಳನ್ನು ಪುನರಾರಂಭಿಸುತ್ತಾರೆಂದು ಕೆಎಆರ್‌ಡಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com