ಬೆಳಗಾವಿ: ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ; ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು

2008 ರಲ್ಲಿ ಸಾಂಬ್ರಾದಲ್ಲಿ ಕನಿಷ್ಠ 270 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಪ್ರತಿ ಎಕರೆ ಭೂಮಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ಆದೇಶಿಸಿದೆ.
ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು
ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು
Updated on

ಬೆಳಗಾವಿ: 2008 ರಲ್ಲಿ ಬೆಳಗಾವಿ ವಿಮಾನ ನಿಲ್ದಾಣದ ವಿಸ್ತರಣೆಯ ಸಂದರ್ಭದಲ್ಲಿ ಜಮೀನು ಸ್ವಾಧೀನಪಡಿಸಿಕೊಂಡ ಹಲವಾರು ರೈತರು, ಸರ್ಕಾರವು ತಮ್ಮ ಬಾಕಿ ಮತ್ತು ಪರಿಹಾರವನ್ನು ಪಾವತಿಸದ ಕಾರಣ ಗುರುವಾರ ಬೆಳಗಾವಿ ಸಹಾಯಕ ಆಯುಕ್ತರ ಕಚೇರಿಯಿಂದ ಎಲ್ಲಾ ಪೀಠೋಪಕರಣಗಳು, ಕಂಪ್ಯೂಟರ್‌ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡರು. ತಮ್ಮ ವಕೀಲರೊಂದಿಗೆ ಬಂದಿದ್ದ ರೈತರು ನ್ಯಾಯಾಲಯದ ನಿರ್ದೇಶನದಂತೆ ಎಸಿ ಕಚೇರಿಯಿಂದ ಪೀಠೋಪಕರಣಗಳನ್ನು ವಶಪಡಿಸಿಕೊಂಡರು.

2008 ರಲ್ಲಿ ಸಾಂಬ್ರಾದಲ್ಲಿ ಕನಿಷ್ಠ 270 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಪ್ರತಿ ಎಕರೆ ಭೂಮಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ಆದೇಶಿಸಿದೆ. ಆದರೆ ಸಂತ್ರಸ್ತ ರೈತರು 2011ರಲ್ಲಿ ತಮ್ಮ ಜಮೀನಿಗೆ ಹೆಚ್ಚಿನ ಪರಿಹಾರ ನೀಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬೆಳಗಾವಿ ಸಿವಿಲ್ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಿದ ನಂತರ, 2018 ರಲ್ಲಿ ಪ್ರತಿ ಎಕರೆ ಭೂಮಿಗೆ ಕನಿಷ್ಠ 40,000 ರೂ ಹೆಚ್ಚುವರಿ ಪರಿಹಾರವನ್ನು ಪಾವತಿಸಲು ಸರ್ಕಾರಕ್ಕೆ ಆದೇಶಿಸಿತು.

ಹೆಚ್ಚುವರಿ ಪರಿಹಾರಕ್ಕಾಗಿ ನ್ಯಾಯಾಲಯದ ಆದೇಶವನ್ನು ಪಾಲಿಸಲು ಸರ್ಕಾರ ವಿಫಲವಾದಾಗ, ರೈತರು ಮತ್ತೆ 2021 ರಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ನಂತರ, ನ್ಯಾಯಾಲಯವು ಯಾವುದೇ ವಿಳಂಬವಿಲ್ಲದೆ ರೈತರ ಬಾಕಿಯನ್ನು ತಕ್ಷಣವೇ ಪಾವತಿಸಲು ಸರ್ಕಾರಕ್ಕೆ ಆದೇಶಿಸಿತು. ನ್ಯಾಯಾಲಯದ ಆದೇಶವನ್ನು ಪಾಲಿಸಲು ಸರ್ಕಾರ ವಿಫಲವಾದಾಗ, ರೈತರು ತಮ್ಮ ವಕೀಲರೊಂದಿಗೆ ಬಂದು ನ್ಯಾಯಾಲಯದ ನಿರ್ದೇಶನದಂತೆ ಎಸಿ ಕಚೇರಿಯಿಂದ ಎಲ್ಲಾ ಪೀಠೋಪಕರಣಗಳನ್ನು ಹೊತ್ತೊಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com