KIADB ನಿಯಮಗಳ ಪ್ರಕಾರವೇ ಖರ್ಗೆ ಪುತ್ರನ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು: ಎಂ.ಬಿ ಪಾಟೀಲ್

ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾನೂನು ಪ್ರಕಾರವೇ ನಿಗದಿತ ಬೆಲೆಗೆ ಸಿಎ ಪ್ಲಾಟ್ ಅನ್ನು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ ಎಂದರು.
ಎಂ.ಬಿ.ಪಾಟೀಲ್
ಎಂ.ಬಿ.ಪಾಟೀಲ್
Updated on

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(KIADB)ಯ ನಿಯಮಗಳ ಪ್ರಕಾರವೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ನೇತೃತ್ವದ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಸೋಮವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾನೂನು ಪ್ರಕಾರವೇ ನಿಗದಿತ ಬೆಲೆಗೆ ಸಿಎ ಪ್ಲಾಟ್ ಅನ್ನು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ ಎಂದರು.

ಬಿಜೆಪಿ ನಾಯಕ ಲೆಹರ್ ಸಿಂಗ್ ಸಿರೋಯಾ ಅವರ ಆರೋಪಗಳನ್ನು ತಳ್ಳಿಹಾಕಿದ ಎಂಬಿ ಪಾಟೀಲ್ ಅವರು, ಪ್ರಕ್ರಿಯೆಯಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದರು.

"ರಾಹುಲ್ ಖರ್ಗೆ ಅವರು ಐಐಟಿ ಪದವೀಧರರಾಗಿದ್ದು, ಅವರು ಮಂಜೂರು ಮಾಡಿದ ಭೂಮಿಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬವು ವಿವಿಧ ಶೈಕ್ಷಣಿಕ ಚಟುವಟಿಕೆಗಳಲ್ಲಿ ದೀರ್ಘಕಾಲದ ತೊಡಗಿಸಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿಎ ನಿವೇಶನಗಳಲ್ಲಿ, ಆರ್ & ಡಿ ಕೇಂದ್ರಗಳನ್ನು ಸ್ಥಾಪಿಸಲು, ಉತ್ಕೃಷ್ಟತೆಯ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಆಸ್ಪತ್ರೆಗಳು, ಹೋಟೆಲ್‌ಗಳು, ಪೆಟ್ರೋಲ್ ಬಂಕ್‌ಗಳು, ಕ್ಯಾಂಟೀನ್‌ಗಳು ಮತ್ತು ವಸತಿ ಸೌಲಭ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶ ಇದೆ. ಯಾವುದೇ ಆಸಕ್ತರು ಮತ್ತು ಅರ್ಹರು ಇದಕ್ಕೆ ಅರ್ಜಿ ಸಲ್ಲಿಸಬಹುದು. ರಾಜ್ಯ ಮಟ್ಟದ ಏಕಗವಾಕ್ಷಿ ಶಿಫಾರಸಿನ ನಂತರ ಸಿಎ ನಿವೇಶನಗಳನ್ನು ಮಾಡಲಾಗುತ್ತದೆ’’ ಎಂದು ಪಾಟೀಲ್ ಹೇಳಿದರು.

ಎಂ.ಬಿ.ಪಾಟೀಲ್
ಖರ್ಗೆ ಕುಟುಂಬ ಏರೋಸ್ಪೇಸ್ ಉದ್ಯಮಿಗಳಾಗಿದ್ದು ಯಾವಾಗ?: ಲಹರ್ ಸಿಂಗ್ ಸಿರೋಯ ಪ್ರಶ್ನೆ

ರಾಹುಲ್ ಖರ್ಗೆ ಅವರಿಗೆ ಏರೋಸ್ಪೇಸ್ ಪಾರ್ಕ್‌ನಲ್ಲಿ ಕೈಗಾರಿಕಾ ನಿವೇಶನ ನೀಡಿಲ್ಲ. ಆದರೆ ಯಾವುದೇ ರಿಯಾಯಿತಿಗಳನ್ನು ನೀಡದೆ, ನಿಗದಿತ ಬೆಲೆಯಲ್ಲಿ ಆರ್ & ಡಿ ಕೇಂದ್ರವನ್ನು ಸ್ಥಾಪಿಸಲು ಸಿಎ ನಿವೇಶನ ನಿಡಲಾಗಿದೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಮಂಜೂರು ಮಾಡಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ 137 ಕೋಟಿ ರೂ.ನಷ್ಟವಾಗಿದೆ. ಈ ಬಗ್ಗೆಯೂ "ಲೆಹರ್ ಸಿಂಗ್ ಚಕಾರ ಎತ್ತಬಹುದಲ್ಲವೇ ಎಂದು ಎಂದು ಎಂಬಿ ಪಾಟೀಲ್ ಪ್ರಶ್ನಿಸಿದರು.

ಈ ಹಿಂದೆ ಕೆಐಎಡಿಬಿಯೇ ಸಿಎಂ ನಿವೇಶನಗಳನ್ನು ಹಂಚಿಕೆ ಮಾಡುತ್ತಿತ್ತು. ಆದರೆ ನಾನು ಅಧಿಕಾರ ವಹಿಸಿಕೊಂಡ ನಂತರ ಹೆಚ್ಚು ಪಾರದರ್ಶಕ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ರಾಜ್ಯ ಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆಯ ನಂತರವೇ ಸಿಎ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವರು ಒತ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com