ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ ಶಿವಕುಮಾರ್

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದರು. ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು
ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಶಿವಕುಮಾರ್
ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಶಿವಕುಮಾರ್
Updated on

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಮಾತನಾಡಿದ ಅವರು, ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದರು. ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಮಾತನಾಡಿದ ಶಿವಕುಮಾರ್ ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ ಎಂದರು. ಜಮೀನನ್ನು ಡೀನೋಟಿಫಿಕೇಶನ್ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ " ನಕಲಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅಸಲಿಗೆ ಮಾತ್ರ ಉತ್ತರ ಕೊಡುತ್ತೇನೆ" ಎಂದು ತಿರುಗೇಟು ನೀಡಿದರು.

ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಶಿವಕುಮಾರ್
ಎತ್ತಿನಹೊಳೆ ಏತ ನೀರಾವರಿ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ: ಡಿಸಿಎಂ ಡಿ.ಕೆ ಶಿವಕುಮಾರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com