ಕಾರವಾರ ನೌಕಾನೆಲೆ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ರವಾನೆ: ಮೂವರನ್ನು ವಶಕ್ಕೆ ಪಡೆದ NIA

ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮೂವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಎನ್‌ಐಎ ಅಧಿಕಾರಿಗಳ ತಂಡವು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕಾರವಾರ: ಐಎನ್‌ಎಸ್ ಕದಂಬ ನೌಕಾನೆಲೆಗೆ ಸಂಬಂಧಿಸಿದ ಚಿತ್ರಗಳು ಮತ್ತು ಮಾಹಿತಿಗಳನ್ನು ಶತ್ರು ದೇಶಗಳಿಗೆ ರವಾನಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ತಂಡ ಮೂವರನ್ನು ಬುಧವಾರ ಕಸ್ಟಡಿಗೆ ತೆಗೆದುಕೊಂಡಿದೆ.

ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮೂವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಎನ್‌ಐಎ ಅಧಿಕಾರಿಗಳ ತಂಡವು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ಕಾರವಾರ ತಾಲೂಕಿನ ತೋಡೂರು ಗ್ರಾಮದ ಸುನೀಲ್ ನಾಯ್ಕ್, ಮುದ್ಗಾ ಗ್ರಾಮದ ವೇತನ್ ರಂಡೇಲ್ ಮತ್ತು ಹಳವಳ್ಳಿ ಗ್ರಾಮದ ಅಕ್ಷಯ್ ರವಿ ನಾಯ್ಕ್ ಎಂದು ಗುರುತಿಸಲಾಗಿದೆ.

ನೌಕಾ ನೆಲೆಗೆ ಸಂಬಂಧಿಸಿದ ಮಾಹಿತಿಯನ್ನು ಪಾಕಿಸ್ತಾನ ಮತ್ತು ಇತರ ಶತ್ರು ರಾಷ್ಟ್ರಗಳಿಗೆ ಕಳುಹಿಸಿದ್ದಕ್ಕಾಗಿ 2023 ರಲ್ಲಿ ಎನ್‌ಐಎ ಹೈದರಾಬಾದ್‌ನಲ್ಲಿ ದೀಪಕ್‌ ಎಂಬಾತನನ್ನು ಬಂಧಿಸಿತು. ಸುನೀಲ್ ನಾಯ್ಕ್, ವೆಥನ್ ತಾಂಡೇಲ್ ಮತ್ತು ಅಕ್ಷಯ್ ನಾಯ್ಕ್ ಅವರು ನೌಕಾನೆಲೆಗೆ ಸಂಬಂಧಿಸಿದ ಚಿತ್ರಗಳು ಮತ್ತು ಮಾಹಿತಿಯನ್ನು ಕಳುಹಿಸಿದ್ದಾರೆ ಮತ್ತು ಅವರು ಶತ್ರು ರಾಷ್ಟ್ರಗಳ ಏಜೆಂಟರಿಗೆ ರವಾನಿಸಿದ್ದಾರೆ ಎಂದು ವಿಚಾರಣೆಯ ವೇಳೆ ದೀಪಕ್ ಬಹಿರಂಗಪಡಿಸಿದ್ದ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ನೌಕಾನೆಲೆಯಲ್ಲಿದ್ದ ಅಕ್ಷಯ್ ನಾಯಕ್ ಗೋವಾಕ್ಕೆ ತೆರಳಿ ಅಲ್ಲಿ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ. ಆತನನ್ನು ಗೋವಾದಲ್ಲಿ ವಶಕ್ಕೆ ಪಡೆಯಲಾಗಿದೆ. ಉಳಿದ ಇಬ್ಬರನ್ನು ನೌಕಾನೆಲೆಯಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸುನೀಲ್ ನಾಯಕ್ ಎಂಬಾತನಿಗೆ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದ್ದು, ಉಳಿದ ಇಬ್ಬರನ್ನು ವಿಚಾರಣೆಗಾಗಿ ರಹಸ್ಯ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಗ್ರಹ ಚಿತ್ರ
ಕಾರವಾರ: ಐಎನ್ಎಸ್ ಕದಂಬ ನೌಕಾನೆಲೆ ಪ್ರವೇಶಿಸಲು ಯತ್ನಿಸಿದ ನಕಲಿ ಅಧಿಕಾರಿ ಬಂಧನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com