RSS ಸ್ವಯಂಸೇವಕ ಪ್ರಸಾದ್ ಬೆಳಾಲ ನಿಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
RSS worker Prasad Belalu
ಆರ್ ಎಸ್ಎಸ್ ಪ್ರಚಾರಕ ಪ್ರಸಾದ್ ಬೆಳಾಲ online desk
Updated on

ಬೆಳಾಲು: ಆರ್ ಎಸ್ಎಸ್ ಪ್ರಚಾರಕ ಪ್ರಸಾದ್ ಬೆಳಾಲ (38) ನೇತ್ರಾವತಿ ನದಿಯಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

7 ವರ್ಷಕ್ಕೂ ಅಧಿಕ ಸಮಯದಿಂದ ಆರ್ ಎಸ್ಎಸ್ ನಲ್ಲಿದ್ದ ಪ್ರಸಾದ್ ಬೆಳಾಲ ಭಾನುವಾರದಂದು ಆಯತಪ್ಪಿ ನೇತ್ರಾವತಿ ನದಿಗೆ ಬಿದ್ದು ಈ ಅನಾಹುತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

RSS worker Prasad Belalu
ಕೂಡಲೇ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸಿ: ಬಾಂಗ್ಲಾದೇಶಕ್ಕೆ RSS ಮನವಿ

ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಗಳು ಪ್ರಸಾದ್ ಬೆಳಾಲ ಅವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಈಶ್ವರ ಮಲ್ಪೆ ನೇತೃತ್ವದ ಡೈವಿಂಗ್ ತಂಡದ ನೆರವಿನೊಂದಿಗೆ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com