110 ಗ್ರಾಮಗಳಲ್ಲಿ ಕಾವೇರಿ ಸಂಪರ್ಕ ಅಭಿಯಾನ: ಜನರಿಗೆ ಮಾಹಿತಿ

ಜನರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಪ್ರಚಾರ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
Ram Prasat Manohar
ರಾಮ್ ಪ್ರಸಾತ್ ಮನೋಹರ್
Updated on

ಬೆಂಗಳೂರು: ಬೆಂಗಳೂರು ಸುತ್ತಮುತ್ತಲಿನ 110 ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಮನೋಹರ್ ಬುಧವಾರ ಪೂರ್ವ ವಲಯದ ಚಳ್ಳಗೆರೆ ಮತ್ತು ಚನ್ನಸಂದ್ರ ಭಾಗದಲ್ಲಿ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾವೇರಿ ಸಂಪರ್ಕ ಅಭಿಯಾನದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

110 ಗ್ರಾಮಗಳಿಗೆ ಸಮರ್ಪಕ ನೀರು ಒದಗಿಸಲು ಬಿಡಬ್ಲ್ಯುಎಸ್‌ಎಸ್‌ಬಿ ಸಿದ್ಧವಿದೆ.ಈಗಾಗಲೇ ನಗರಕ್ಕೆ ಹೆಚ್ಚುವರಿ ನೀರು ಪೂರೈಕೆಯಾಗುತ್ತಿದೆ. ಜನರು ಇದರ ಪ್ರಯೋಜನ ಪಡೆಯಲು ಸಂಪರ್ಕ ಪಡೆಯುವುದು ಅವಶ್ಯ. ಕೊಳವೆಬಾವಿ ಕೊರತೆಯಂತಹ ಸಮಸ್ಯೆಗಳು ಬರದಂತೆ ಜನರು ಕುಡಿಯುವ ನೀರಿನ ಸಂಪರ್ಕ ಪಡೆಯಬೇಕು. ಬೇಸಿಗೆಯಲ್ಲಿ ನೀರಿನ ಕೊರತೆ ಮರುಕಳಿಸದಂತೆ ಎಲ್ಲಾ 110 ಹಳ್ಳಿಗಳಲ್ಲಿ ಮನೆ-ಮನೆಗೆ ಕಾವೇರಿ ಸಂಪರ್ಕ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಪ್ರಚಾರ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದರು.

Ram Prasat Manohar
ಬೆಂಗಳೂರು: ಕಾವೇರಿ ನೀರಿಗಾಗಿ ಕಾಯುತ್ತಿವೆ ಕೆಆರ್ ಪುರಂ, ಮಹದೇವಪುರದ 31 ಗ್ರಾಮಗಳು

ಮುಂದಿನ ದಿನಗಳಲ್ಲಿ ಕಾವೇರಿ ಕುಡಿಯುವ ನೀರು ಸಂಪರ್ಕ ಅಭಿಯಾನದ ಭಿತ್ತಿಪತ್ರ, ಮನೆ ಬಾಗಿಲಿಗೆ ಅರ್ಜಿ, ಠೇವಣಿ ಶುಲ್ಕದ ವಿವರ ಸೇರಿದಂತೆ ಮಾಹಿತಿ ನೀಡಲು ಮಂಡಳಿ ನಿರ್ಧರಿಸಿದೆ. ಬಿಡಬ್ಲ್ಯೂಎಸ್‌ಎಸ್‌ಬಿ ಕಾರ್ಯಕರ್ತರಿಗೆ ಮನೆ ಮನೆಗೆ ಹೋಗಿ ಇವುಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಮತ್ತು ಪ್ರಚಾರದ ಸ್ಥಳ, ದಿನಾಂಕ ಮತ್ತು ಸಮಯದ ಬಗ್ಗೆ ಜನರಿಗೆ ತಿಳಿಸಲಾಗಿದೆ ಎಂದು ಮನೋಹರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com