
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಶುಕ್ರವಾರವೂ ಜಾಮೀನು ಸಿಗಲಿಲ್ಲ. ರೆಗ್ಯೂಲರ್ ಬೇಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ
ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠದಲ್ಲಿ ನಟ ದರ್ಶನ್ ಸೇರಿದಂತೆ ಇತರೆ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಮಾಡಿದ್ದ ವಾದಕ್ಕೆ ಇಂದು ಪ್ರತಿವಾದ ಮಾಡಿದ ಎಸ್ಪಿಪಿ ಪ್ರಸನ್ನ ಕುಮಾರ್, ದರ್ಶನ್ ಆರೋಗ್ಯದ ಹಿನ್ನೆಲೆಯಲ್ಲಿ ಪಡೆದ ಜಾಮೀನನ್ನು ದುರ್ಬಳಕೆ ಮಾಡಿಕೊಂಡಿದ್ದು, ಅವರ ಜಾಮೀನನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ವಾದ-ಪ್ರತಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿದರು.ಸದ್ಯ ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದಗಳನ್ನು ಆಲಿಸಿರುವ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.
ಮತ್ತೊಂದೆಡೆ ದರ್ಶನ್ ಮಧ್ಯಂತರ ಜಾಮೀನಿನ ಅವಧಿ ಕೂಡ ಡಿಸೆಂಬರ್ 11ಕ್ಕೆ ಮುಕ್ತಾಯ ಆಗಲಿದ್ದು ದರ್ಶನ್ಗೆ ಜಾಮೀನು ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
Advertisement