ಬಳ್ಳಾರಿ: ವಿಮ್ಸ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ; ಪರಿಶೀಲನೆ

ಲೋಕಾಯುಕ್ತ ಬಳ್ಳಾರಿ ಎಸ್ ಪಿ ಸಿದ್ದರಾಜು ನೇತೃತ್ವದ 25ಕ್ಕೂ ಹೆಚ್ಚಿನ ಸಿಬ್ಬಂದಿಯನ್ನೊಳಗೊಂಡ ತಂಡ ಎರಡು ಭಾಗಗಳಾಗಿ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಲಗ್ಗೆ ಹಾಕಿತು.
Lokayukta
ಲೋಕಾಯುಕ್ತ ಸಾಂದರ್ಭಿಕ ಚಿತ್ರ
Updated on

ಬಳ್ಳಾರಿ: ಬಾಣಂತಿಯರ ಸರಣಿ ಸಾವಿನಿಂದಾಗಿ ರಾಜ್ಯದಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ಬಳ್ಳಾರಿ ಜಿಲ್ಲಾ ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್ ಗೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ಭೇಟಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಬಳ್ಳಾರಿ ಎಸ್ ಪಿ ಸಿದ್ದರಾಜು ನೇತೃತ್ವದ 25ಕ್ಕೂ ಹೆಚ್ಚಿನ ಸಿಬ್ಬಂದಿಯನ್ನೊಳಗೊಂಡ ತಂಡ ಎರಡು ಭಾಗಗಳಾಗಿ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಲಗ್ಗೆ ಹಾಕಿತು.

ಪರಿಶೀಲನೆಯಲ್ಲಿ ಹೊಸಪೇಟೆ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿಯೂ ಇದ್ದಾರೆ. ಬಳ್ಳಾರಿಯಲ್ಲಿ ಆಗಿರುವ ಬಾಣಂತಿಯರ ಸರಣಿ ಸಾವು ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಅದರ ಭಾಗವಾಗಿ ಇಂದು ಪರಿಶೀಲನೆ ನಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.

Lokayukta
ಬಳ್ಳಾರಿ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ; ನನ್ನ ತಪ್ಪಿದ್ರೆ ರಾಜೀನಾಮೆ ನೀಡಲು ಸಿದ್ಧ- ದಿನೇಶ್ ಗುಂಡೂರಾವ್

ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ನವೆಂಬರ್ 9 ರಿಂದ 11ರ ನಡುವೆ ನಾಲ್ಕು ತಾಯಂದಿರ ಸಾವು ವರದಿಯಾಗಿತ್ತು. ಡಿಸೆಂಬರ್ 5ರ ರಾತ್ರಿ ಮತ್ತೊಬ್ಬರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com