ಕಳೆದ 5 ವರ್ಷಗಳಲ್ಲಿ 3,350ಕ್ಕೂ ಹೆಚ್ಚು ಬಾಣಂತಿಯರ ಸಾವು: ಅಂಕಿ-ಅಂಶಗಳೊಂದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮುಖ್ಯಮಂತ್ರಿಗಳ ಕಚೇರಿ ಇಂದು ಬಾಣಂತಿಯರ ಸಾವಿನ ಬಗ್ಗೆ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಿದೆ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 3,350ಕ್ಕೂ ಹೆಚ್ಚು ಬಾಣಂತಿಯರ ಸಾವುಗಳು ಸಂಭವಿಸಿವೆ. ನಮ್ಮ ಅವಧಿಯಲ್ಲಿ ಸಾವುನೋವು ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ- ಅಂಶಗಳ ಮೂಲಕ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಇತ್ತೀಚಿನ ಬಾಣಂತಿಯರ ಸಾವಿನ ಕುರಿತು ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿ ಇಂದು ಬಾಣಂತಿಯರ ಸಾವಿನ ಬಗ್ಗೆ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಿದೆ.

ಕಳೆದ ಐದು ವರ್ಷಗಳಲ್ಲಿ ಒಟ್ಟು 3,364 ಬಾಣಂತಿಯರು ಮೃತಪಟ್ಟಿದ್ದಾರೆ. ಅಂಕಿ-ಅಂಶಗಳ ಪ್ರಕಾರ, ಬಿಜೆಪಿ ಅಧಿಕಾರದಲ್ಲಿದ್ದಾಗ ಕೋವಿಡ್ -19 ಸಮಯದಲ್ಲಿ ಸಂಭವಿಸಿದ ಅತಿ ಹೆಚ್ಚು ತಾಯಂದಿರ ಸಾವುಗಳನ್ನು ಬಹಿರಂಗಪಡಿಸಿದೆ.

Siddaramaiah
ಬಿಮ್ಸ್ ನಲ್ಲಿ ಬಾಣಂತಿಯರ ಸಾವು: ಐಎಎಸ್ ಅಧಿಕಾರಿ ನೇತೃತ್ವದ ತಂಡದಿಂದ ಔಷಧ ಖರೀದಿಯ ತನಿಖೆ

2019-2020 ರಲ್ಲಿ, 662 ತಾಯಂದಿರ ಸಾವುಗಳು ವರದಿಯಾಗಿದ್ದು, ನಂತರದ ವರ್ಷದಲ್ಲಿ ಈ ಸಂಖ್ಯೆ 714ಕ್ಕೆ ಸ್ವಲ್ಪ ಏರಿಕೆಯಾಗಿದೆ.

2021-2022 ರಲ್ಲಿ 595 ಬಾಣಂತಿಯರ ಸಾವು, 2022-2023 ರಲ್ಲಿ 527 ಮತ್ತು 2023-2024 ರಲ್ಲಿ 518 ಸಾವುಗಳು ದಾಖಲಾಗಿವೆ.

ನವೆಂಬರ್ 2024 ರ ಹೊತ್ತಿಗೆ, ರಾಜ್ಯದಲ್ಲಿ ತಾಯಂದಿರ ಸಾವಿನ ಸಂಖ್ಯೆ 348 ರಷ್ಟಿದೆ.

ಭಾನುವಾರ, ರಾಜ್ಯ ಸರ್ಕಾರ ಬಳ್ಳಾರಿ ಆಸ್ಪತ್ರೆ ಮತ್ತು ರಾಜ್ಯಾದ್ಯಂತ ಇತರ ಸ್ಥಳಗಳಲ್ಲಿ ಬಾಣಂತಿಯರ ಸಾವಿನ ಕುರಿತು ತನಿಖೆಗಾಗಿ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com