Ranjith Ballal
ರಂಜಿತ್ ಬಲ್ಲಾಳ್

ಉಡುಪಿ: ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು

ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
Published on

ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ.

ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಸೋಮವಾರ ಸಂಜೆ 4-30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ರಂಜಿತ್ ಕಾರು ರೇಸಿಂಗ್ ನಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದರು.

ಪ್ರತಿಭಾವಂತರಾಗಿದ್ದ ರಂಜಿತ್ ನೂರಕ್ಕೂ ಹೆಚ್ಚು ಟ್ರೋಫಿಗಳನ್ನು ಗೆದ್ದಿದ್ದರು. ಆಟೋ ಕ್ರಾಸ್ ಹಿಲ್ ಕ್ಲೈಂಬ್ ನಲ್ಲಿ ಅತ್ಯಂತ ವೇಗದ ಚಾಲಕರಾಗಿಯೂ ಹೊರಹೊಮ್ಮಿದ್ದರು.

Ranjith Ballal
Mumbai: BEST ಬಸ್ ಅಪಘಾತ; ವಿಧ್ವಂಸಕ ಕೃತ್ಯಕ್ಕೆ ಯತ್ನವೇ?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com