BJP legislators raise slogans against the state government
ಬಿಜೆಪಿ ಮುಖಂಡರ ಪ್ರತಿಭಟನೆ

ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯ, ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಪ್ರಜಾಪ್ರಭುತ್ವ ಧಮನ ಮಾಡುತ್ತಿದೆ.
Published on

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು, ಪಂಚಮಸಾಲಿ ಆಂದೋಲನದಲ್ಲಿ ಅವ್ಯವಹಾರ ನಡೆದಿದೆ ಹೀಗಾಗಿ ಸರಕಾರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ನಡೆಸಿದರು.

ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯ, ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಪ್ರಜಾಪ್ರಭುತ್ವ ಧಮನ ಮಾಡುತ್ತಿದೆ, ಸರ್ವಾಧಿಕಾರ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ, ಅಲ್ಪಸಂಖ್ಯಾತರಿಗೆ ಕೋಟಿ ಕೋಟಿ ಲಿಂಗಾಯತರಿಗೆ ಲಾಠಿ ಏಟು ಎಂಬ ಘೋಷಣೆಗಳೊಂದಿಗೆ ಶಾಸಕರು ಆಕ್ರೋಶ ಹೊರಹಾಕಿದರು. ಗುರುವಾರ ಮಧ್ಯಾಹ್ನ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು, ಪ್ರತಿಪಕ್ಷ ಸದಸ್ಯರು ಸದನದ ಬಾವಿಗೆ ಪ್ರವೇಶಿಸಿದರು.

ಪ್ರತಿಭಟನೆಯ ದುರುಪಯೋಗ, ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ಆಂದೋಲನದ ಸಮಯದಲ್ಲಿ ಗಾಯಗೊಂಡವರು ಎಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಒತ್ತಾಯಿಸಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಭಾನಾಯಕ ಬೋಸರಾಜು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮನವಿ ಮಾಡಿದರೂ ಅವರ ಗಲಾಟೆ ಮುಂದುವರಿದಿತ್ತು. ಗಾಯಾಳುಗಳ ಮಾಹಿತಿ ಕೇಳಿದಾಗ ಸದಸ್ಯರು ಮರುದಿನ ನೀಡುವುದಾಗಿ ತಿಳಿಸಿದರು. ಗದ್ದಲ ನಿಯಂತ್ರಣ ತಪ್ಪಿತು ಎಂದು ಕಾಂಗ್ರೆಸ್ ಸದಸ್ಯರು ಹೇಳಲು ಮುಂದಾದಾಗ, ಪ್ರತಿಪಕ್ಷದ ಸದಸ್ಯರು ಸರ್ಕಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಕೆಲಕಾಲ ಮಾತಿನ ಚಕಮಕಿ ನಡೆಸಿದ ನಂತರ, ನಿಯಮ 72ರ ಅಡಿಯಲ್ಲಿ ಶುಕ್ರವಾರ ಚರ್ಚೆಗೆ ಸಮಯ ನಿಗದಿಪಡಿಸುವುದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭರವಸೆ ನೀಡಿದ ನಂತರ ಸದಸ್ಯರು ಹಿಂಪಡೆದರು.

BJP legislators raise slogans against the state government
ಪಂಚಮಸಾಲಿ ಪ್ರತಿಭಟನೆ ಶಮನಗೊಳಿಸದ ಸರ್ಕಾರ; ಗಾಯದ ಮೇಲೆ 'ಉಪ್ಪು' ಸವರಿದ CM ಹೇಳಿಕೆ; ಕಿಚ್ಚು ಹೊತ್ತಿಸಿದ 'ಪರಂ' ಸಮರ್ಥನೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com