ಮೀಸಲಾತಿ ಮಿತಿ ಶೇ.50ಕ್ಕಿಂತ ಹೆಚ್ಚಿಸುವಂತೆ ಪರಿಷತ್ ನಲ್ಲಿ ಸದಸ್ಯರ ಒತ್ತಾಯ

ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳ ಮೀಸಲಾತಿ ಕೋಟಾವನ್ನು ಈಗಿರುವ ಶೇ.4ರಿಂದ ಶೇ.7ಕ್ಕೆ ಹೆಚ್ಚಿಸಬೇಕು ಎಂದು ಬಿಜೆಪಿ ಎಂಎಲ್ ಸಿ ತಳವಾರ ಸಾಬಣ್ಣ ಪ್ರಶ್ನಿಸಿದಾಗ ವಿಷಯ ಚರ್ಚೆಗೆ ಬಂತು.
Siddaramaiah
ಸಿದ್ದರಾಮಯ್ಯ
Updated on

ಬೆಳಗಾವಿ: ರಾಜ್ಯದಲ್ಲಿ ಮೀಸಲಾತಿ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಬೇಕೆಂಬ ಬೇಡಿಕೆಯು ಪರಿಷತ್ತಿನಲ್ಲಿ ಶುಕ್ರವಾರ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಂಎಲ್‌ಸಿಗಳು ಈ ವಿಷಯವನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಮತ್ತೆ ಮುಂಚೂಣಿಗೆ ಬಂದಿತು.

ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳ ಮೀಸಲಾತಿ ಕೋಟಾವನ್ನು ಈಗಿರುವ ಶೇ.4ರಿಂದ ಶೇ.7ಕ್ಕೆ ಹೆಚ್ಚಿಸಬೇಕು ಎಂದು ಬಿಜೆಪಿ ಎಂಎಲ್ ಸಿ ತಳವಾರ ಸಾಬಣ್ಣ ಪ್ರಶ್ನಿಸಿದಾಗ ವಿಷಯ ಚರ್ಚೆಗೆ ಬಂತು. ರಾಜ್ಯದಲ್ಲಿ ಬಹುತೇಕ ಹಿಂದುಳಿದ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಮೀಸಲಾತಿ ನೀಡಬೇಕು ಎಂದು ಹೇಳಿದರು. ಬೇಡಿಕೆಯನ್ನು ಬೆಂಬಲಿಸಿದ ಕಾಂಗ್ರೆಸ್ ಎಂಎಲ್ ಸಿ ಡಿ ಟಿ ಶ್ರೀನಿವಾಸ್, ಹಿಂದೆ ಸುಮಾರು 52 ಸಮುದಾಯಗಳಿದ್ದಾಗ ಸರ್ಕಾರ ಶೇ.5 ರಷ್ಟು ಮೀಸಲಾತಿ ನೀಡುತ್ತಿತ್ತು, ಆದರೆ ಕುತೂಹಲಕಾರಿಯಾಗಿ, ಸರ್ಕಾರವು ಮೀಸಲಾತಿಯನ್ನು ಪರಿಷ್ಕರಿಸಿ ಶೇ. 4ಕ್ಕೆ ಇಳಿಸಿತು. ರಾಜ್ಯದಲ್ಲಿ ಸಮುದಾಯಗಳ ಸಂಖ್ಯೆ 95 ಕ್ಕಿಂತ ಹೆಚ್ಚಿದೆ ಎಂದು ವಿವರ ನೀಡಿದರು.

ಅವರ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸುವಂತೆ ಸರಕಾರವನ್ನು ಸಾಬಣ್ಣ ಆಗ್ರಹಿಸಿದರು. ಇದಕ್ಕೆ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಮಾತನಾಡಿ ಸುಪ್ರೀಂ ಕೋರ್ಟ್ ಮೀಸಲಾತಿಯನ್ನು ಶೇ.50ಕ್ಕೆ ಸೀಮಿತಗೊಳಿಸಿರುವುದರಿಂದ ಮೀಸಲಾತಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಎಂಎಲ್‌ಸಿ ಹಾಗೂ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸಚಿವರ ಹೇಳಿಕೆಯನ್ನು ತಳ್ಳಿಹಾಕಿ, ಸುಪ್ರೀಂ ಕೋರ್ಟ್ ಕೇವಲ ಅವಲೋಕನಗಳನ್ನು ಮಾಡಿದೆ ಮತ್ತು ಮೀಸಲಾತಿಗೆ 50% ಮಿತಿಯನ್ನು ಹಾಕಲು ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಹೇಳಿದರು.

Siddaramaiah
2ಎ ಮೀಸಲಾತಿಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೊರೆ ಹೋಗಿ: ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸಲಹೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com