ST/SC ಫಲಾನುಭವಿಗಳ ವಿರಳ ಕಾಯಿಲೆಗಳ ವೈದ್ಯಕೀಯ ಚಿಕಿತ್ಸೆಗೆ 35 ಕೋಟಿ ರೂ ಕಾರ್ಪಸ್‌ ನಿಧಿ

ಸರ್ಕಾರದ ಈ ಉಪಕ್ರಮವು ಚಿಕಿತ್ಸೆಯಿಂದಾಗಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದವರಿಗೆ ಎದುರಾಗುವ ಆರ್ಥಿಕ ಹೊರೆಯನ್ನು ಪರಿಹರಿಸುವ ಉದ್ದೇಶವನ್ನು ಹೊಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಜನರಿಗೆ ಎದುರಾಗುವ ಅಪರೂಪದ ಕಾಯಿಲೆಗಳಿಗೆ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು 35 ಕೋಟಿ ರೂಪಾಯಿ ಕಾರ್ಪಸ್ ಫಂಡ್‌ (ಮೀಸಲು ನಿಧಿ)ಸ್ಥಾಪಿಸಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.

ಸರ್ಕಾರದ ಈ ಉಪಕ್ರಮವು ಚಿಕಿತ್ಸೆಯಿಂದಾಗಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದವರಿಗೆ ಎದುರಾಗುವ ಆರ್ಥಿಕ ಹೊರೆಯನ್ನು ಪರಿಹರಿಸುವ ಉದ್ದೇಶವನ್ನು ಹೊಂದಿದೆ.

ಈ ನಿಧಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನಿರ್ವಹಿಸಲಾಗುತ್ತದೆ ಮತ್ತು ಅಸ್ತಿತ್ವದಲ್ಲಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳ ಅಡಿಯಲ್ಲಿ ಒಳಗೊಂಡಿರದ ಚಿಕಿತ್ಸೆಗಳಿಗೆ ಆದ್ಯತೆ ನೀಡುತ್ತದೆ.

ಸಂಗ್ರಹ ಚಿತ್ರ
ಸಿಎಸ್‌ಆರ್‌ ನಿಧಿ ಬಳಸಿ ಸರ್ಕಾರಿ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ!

ಆರಂಭದಲ್ಲಿ, ಸಮಾಜ ಕಲ್ಯಾಣ ಇಲಾಖೆಯು ಬಜೆಟ್ ನಿಬಂಧನೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಹೊಂದಿತ್ತು. ಆದರೆ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯ ನಂತರ ಜವಾಬ್ದಾರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಯಿತು.

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಮತ್ತು ಅಪರೂಪದ ರೋಗಗಳ ರಾಷ್ಟ್ರೀಯ ನೀತಿ (ಎನ್‌ಪಿಆರ್‌ಡಿ) ಯಂತಹ ಕಾರ್ಯಕ್ರಮಗಳಿಂದ 16 ರೋಗಗಳ ಚಿಕಿತ್ಸಾ ವೆಚ್ಚವನ್ನು ತೆಗೆಯಲಾಗಿದ್ದು, ಸರ್ಕಾರ ಮೀಸಲಿಟ್ಟಿರುವ ನಿಧಿಯಡಿ ಈ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com