ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಬಂಧನ!

ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ 40 ವರ್ಷದ ಲೋಕೇಶ್ ಎಂಬಾತನ ಎಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲೋಕೇಶ್ ಗೆ ಶರಣಾಗುವಂತೆ ಕೇಳಿಕೊಂಡಿದ್ದರು.
ರೌಡಿಶೀಟರ್ ಲೋಕೇಶ್
ರೌಡಿಶೀಟರ್ ಲೋಕೇಶ್PTI
Updated on

ಬೆಂಗಳೂರು: ಶರಣಾಗಲು ಒಪ್ಪದೆ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ರೌಡಿಶೀಟರ್ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಸಂದ್ರ ಬಳಿ ಈ ಘಟನೆ ನಡೆದಿದೆ.

ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ 40 ವರ್ಷದ ಲೋಕೇಶ್ ಎಂಬಾತನ ಎಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲೋಕೇಶ್ ಗೆ ಶರಣಾಗುವಂತೆ ಕೇಳಿಕೊಂಡಿದ್ದರು. ಆದರೆ ಇದಕ್ಕೆ ಒಪ್ಪದೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಅಡ್ಡಬಂದ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಯಾಗಿ ಪೊಲೀಸರು ಲೋಕೇಶ್ ನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸದ್ಯ ಗಾಯಗೊಂಡಿರುವ ಆರೋಪಿ ಲೋಕೇಶ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಲೋಕೇಶ್ ಮತ್ತು ಆತನ ಸಹಚರರು ಮತ್ತೊಬ್ಬ ರೌಡಿಶೀಟರ್ ಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿಯೂ ಬೇಕಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿಶೀಟರ್ ಲೋಕೇಶ್
ಹೋಟೆಲ್, ಬೇಕರಿ ಉದ್ಯಮಿಗಳ ಮೇಲೆ ಅಪರಾಧ ಕೃತ್ಯ ಹೆಚ್ಚಳ: ಜಿ.ಕೆ ಶೆಟ್ಟಿ ಕಳವಳ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com