ಈ ಬಾರಿ ಅಲ್ಪಾವಧಿ ಚಳಿಗಾಲ: ಚಳಿಯ ತೀವ್ರತೆ ಕಡಿಮೆ, ಹೆಚ್ಚೆಚ್ಚು ಶೀತ ಗಾಳಿ

ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ಮತ್ತು ಅವಲೋಕನಗಳ ಪ್ರಕಾರ ರಾಜ್ಯದ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ-ಆಂತರಿಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಚಳಿಗಾಲದ ಆರಂಭದ ಮೇಲೆ ಸೈಕ್ಲೋನ್ ಪ್ರಭಾವ ಬೀರಿವೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಅನೇಕ ಕಾರಣಗಳಿಂದಾಗಿ ದಕ್ಷಿಣ-ಆಂತರಿಕ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಚಳಿಗಾಲದ ಅವಧಿ ಅಲ್ಪಾವಧಿಯಾಗಿದ್ದು ಕಡಿಮೆ ಚಳಿ ಇರುತ್ತದೆ.

ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ಮತ್ತು ಅವಲೋಕನಗಳ ಪ್ರಕಾರ ರಾಜ್ಯದ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ-ಆಂತರಿಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಚಳಿಗಾಲದ ಆರಂಭದ ಮೇಲೆ ಸೈಕ್ಲೋನ್ ಪ್ರಭಾವ ಬೀರಿವೆ. “ಈ ಬಾರಿ ನೈಋತ್ಯ ಮತ್ತು ಈಶಾನ್ಯ ಮಾನ್ಸೂನ್‌ ವಿಸ್ತರಣೆಯಾಗಿದೆ. ಪೂರ್ವದ ಮಾರುತಗಳು ಡಿಸೆಂಬರ್‌ನಲ್ಲಿಯೂ ಮುಂದುವರಿಯಲಿದ್ದು, ತೇವಾಂಶ ಮತ್ತು ಮಳೆಯನ್ನು ತರುತ್ತದೆ, ಇದು ದಕ್ಷಿಣ-ಆಂತರಿಕ ಕರ್ನಾಟಕದ ಚಳಿಗಾಲದ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಚಳಿಗಾಲ ವಿಳಂಬವಾಗಿದೆ ಎಂದು ಐಎಂಡಿ ಬೆಂಗಳೂರು ಪ್ರಭಾರಿ ನಿರ್ದೇಶಕ ಎನ್ ಪುವಿಯಸರನ್ ಹೇಳಿದ್ದಾರೆ.

ವ್ಯವಸ್ಥೆಗಳ ರಚನೆಯು ದಕ್ಷಿಣ-ಆಂತರಿಕ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗಿದೆ ಎಂದು ಅವರು ಹೇಳಿದರು. ಅಲ್ಲದೆ, ಹಲವು ದಿನಗಳು ಮೋಡ ಕವಿದ ವಾತಾವಾರಣವಿತ್ತು,ಹೀಗಾಗಿ ಚಳಿಗಾಲದ ಮೇಲೆ ಪರಿಣಾಮ ಬೀರಿದೆ ಎಂದು ಅವರು ಹೇಳಿದರು. ಪೂರ್ವ ದಿಕ್ಕಿನ ಮಾರುತಗಳು ಹೆಚ್ಚಾದಾಗ ಹೆಚ್ಚು ಮಳೆ ಮತ್ತು ಕಡಿಮೆ ಚಳಿಗಾಲ ಇರುತ್ತದೆ ಎಂದು ಅವರು ವಿವರಿಸಿದರು. ಮುಂದಿನ ದಿನಗಳಲ್ಲಿ ಮತ್ತೊಂದು ವ್ಯವಸ್ಥೆ ರೂಪುಗೊಳ್ಳುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಚಳಿಗಾಲದ ಚಳಿಯು ತಿಂಗಳ ಅಂತ್ಯದ ವೇಳೆಗೆ ಪ್ರಾರಂಭವಾಗುವ ಸಾಧ್ಯತೆಯಿದೆ.

IMD ಮುನ್ಸೂಚನೆಯ ಪ್ರಕಾರ, ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಬಂಗಾಳ ಕೊಲ್ಲಿಯ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇದೆ. ಇದರ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದ ಮೇಲೆ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯು ಸಹ ಮುಂದುವರಿದಿದೆ.

ಹೆಚ್ಚುತ್ತಿರುವ ವಾಹನಗಳು ಮತ್ತು ಹೊರಸೂಸುತ್ತಿರುವ ಹೊಗೆ, ಹೆಚ್ಚುತ್ತಿರುವ ನಿರ್ಮಾಣ ಚಟುವಟಿಕೆಗಳು ಮತ್ತು ಕಟ್ಟಡಗಳ ಸಂಖ್ಯೆಯಲ್ಲಿ ಹೆಚ್ಚಳವು ಋತುವಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹವಾಮಾನ ತಜ್ಞರು ಹೇಳಿದರು.

ಕಟ್ಟಡಗಳು ಮತ್ತು ಇತರ ಕಾಂಕ್ರೀಟ್ ಸ್ಥಳಗಳ ಸುತ್ತಮುತ್ತಲಿನ ಪ್ರದೇಶಗಳು ಸಾಕಷ್ಟು ಶಾಖವನ್ನು ಹಿಡಿದಿಟ್ಟುಕೊಳ್ಳುತ್ತವೆ. ಚಳಿಗಾಲದ ಚಳಿ ಹೆಚ್ಚು ಕಾಲ ಉಳಿಯುವುದಿಲ್ಲ. ಕಡಿಮೆ ತಾಪಮಾನದ ಮಳೆಯು ನಗರ ಪ್ರದೇಶಗಳಲ್ಲಿ ಸುಮಾರು 1-2 ಗಂಟೆಗಳ ಕಾಲ ಚಾಲ್ತಿಯಲ್ಲಿದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 3-4 ಗಂಟೆಗಳಿರುತ್ತದೆ ಎಂದು ಇನ್ನೊಬ್ಬ IMD ಅಧಿಕಾರಿ ವಿವರಿಸಿದರು.

Representational image
ಶುರುವಾಯ್ತು ಚಳಿಗಾಲ: ತಪ್ಪದೇ ಸಿಹಿ ಗೆಣಸು ಸೇವಿಸಿ, ದೇಹದಲ್ಲಾಗುವ ಚಮತ್ಕಾರ ನೋಡಿ...!

IMD ತೀವ್ರ ಶೀತ ಅಲೆಯ ಮುನ್ಸೂಚನೆ

ವಿಜಯಪುರ, ಕಲಬುರಗಿ ಮತ್ತು ಬೀದರ್‌ನಲ್ಲಿ ತೀವ್ರ ಶೀತ ಅಲೆಯ ಸ್ಥಿತಿಯನ್ನು ಮುನ್ಸೂಚಿಸುತ್ತದೆ ಮತ್ತು ಮುಂದಿನ ಮೂರು ದಿನಗಳವರೆಗೆ ರೆಡ್ ಅಲರ್ಟ್ ಘೋಷಿಸಿದೆ, ಅಲ್ಲಿ ಕನಿಷ್ಠ ತಾಪಮಾನವು 7 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಎಂದು ಐಎಂಡಿ ಮುಂದಿನ ಮೂರು ದಿನಗಳವರೆಗೆ ಯಾದಗಿರಿ ಮತ್ತು ಬಾಗಲಕೋಟೆಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.ಈ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ನಷ್ಟಿರುತ್ತದೆ.

IMD ಅಂಕಿಅಂಶಗಳ ಪ್ರಕಾರ, ಸೋಮವಾರದಂದು ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 15.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಎಚ್‌ಎಎಲ್ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ರಮವಾಗಿ 14.7 ಮತ್ತು 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೀದರ್‌ನಲ್ಲಿ ಕನಿಷ್ಠ ತಾಪಮಾನ 7.5 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 8.5 ಡಿಗ್ರಿ ಸೆಲ್ಸಿಯಸ್ ಮತ್ತು ಧಾರವಾಡದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com