ಸಿ.ಟಿ ರವಿ ಬಂಧನಕ್ಕೆ ಖಂಡನೆ: ನಾಳೆ ಚಿಕ್ಕಮಗಳೂರು ನಗರ ಬಂದ್‌ಗೆ ಬಿಜೆಪಿ ಕರೆ

ಸಿಟಿ ರವಿ ಬಂಧನವಾಗುತ್ತಿದ್ದಂತೆ ಚಿಕ್ಕಮಗಳೂರಿನಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
Chikkamagaluru
ಚಿಕ್ಕಮಗಳೂರು ಸಾಂದರ್ಭಿಕ ಚಿತ್ರ
Updated on

ಚಿಕ್ಕಮಗಳೂರು: ಸುವರ್ಣ ಸೌಧ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ತವರು ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಾಳೆ ಬಂದ್ ಗೆ ಬಿಜೆಪಿ ಕರೆ ನೀಡಿದೆ.

ಸಿ.ಟಿ. ರವಿ ಬಂಧನವಾಗುತ್ತಿದ್ದಂತೆ ಚಿಕ್ಕಮಗಳೂರಿನಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸಿಟಿ ರವಿ ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲಾ ಬಿಜೆಪಿ ಸದಸ್ಯರು ಮಹತ್ವದ ಸಭೆ ನಡೆಸಿ, ನಾಳೆ ಚಿಕ್ಕಮಗಳೂರು ನಗರ ಬಂದ್‌ಗೆ ತೀರ್ಮಾನಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಧುರಾಜ್ ಅರಸ್ , ನಾಳೆ ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ನೀಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್‌ ಮಾಡಲಾಗುತ್ತೆ. ಹೀಗಾಗಿ ಸಾರ್ವಜನಿಕರು ಈ ಬಂದ್​ಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

Chikkamagaluru
ಬಿಜೆಪಿ MLC ಸಿಟಿ ರವಿ ಬಂಧನ: ಆಶ್ಲೀಲ ಪದ ಬಳಸಿಲ್ಲ, ಪೊಲೀಸರ ಮುಂದೆ ಹೇಳಿಕೆ

ಈ ಮಧ್ಯೆ ಸಿ.ಟಿ. ರವಿ ಮನೆ ಬಳಿ ಜಮಾಯಿಸಿದ್ದ ಕಾರ್ಯಕರ್ತರು , ಬಸವನಹಳ್ಳಿ ರಸ್ತೆಯಲ್ಲಿ ಧರಣಿ ನಡೆಸಿ ಸಿಟಿ ರವಿ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಲಾಗಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಲ್ಲೆ ನಡೆಸಲು ಮುಂದಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com