ಚಿತ್ರದುರ್ಗದ ಗುಯಿಲಾಳ್ ಬಳಿ ಬೆಂಕಿಗೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಯರ್ ಸ್ಫೋಟಗೊಂಡ ಕೂಡಲೇ ಟೋಲ್ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
Fire tender douse the fire
ಹೊತ್ತಿ ಉರಿಯುತ್ತಿರುವ ಬಸ್ ನ ಬೆಂಕಿಯನ್ನು ಆರಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ
Updated on

ಹಿರಿಯೂರು(ಚಿತ್ರದುರ್ಗ): ಟಯರ್ ಸ್ಫೋಟಗೊಂಡು ಖಾಸಗಿ ಬಸ್ ಗೆ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗುಯಿಲಾಳ್ ಟೋಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಯರ್ ಸ್ಫೋಟಗೊಂಡ ಕೂಡಲೇ ಟೋಲ್ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಖಾಸಗಿ ಬಸ್ಸು ದಾವಣಗೆರೆಯಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು. ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com