ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ಸಚಿವೆ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ: ಉನ್ನತಮಟ್ಟದ ತನಿಖೆಗೆ ಮಹಿಳಾ ಆಯೋಗ ಆಗ್ರಹ

ಈ ಸಂಬಂಧ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಪತ್ರ ಬರೆದಿದ್ದಾರೆ.
Published on

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಸಿ.ಟಿ.ರವಿ ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಆಗ್ರಹಿಸಿದೆ.

ಈ ಸಂಬಂಧ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಪತ್ರ ಬರೆದಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ
ಸಿಟಿ ರವಿ ಬಂಧಿಸದಿದ್ದಿದ್ದರೆ ಮತ್ತಷ್ಟು ದೊಡ್ಡ ಸಮಸ್ಯೆಯಾಗುತ್ತಿತ್ತು: ಗೃಹ ಸಚಿವ ಪರಮೇಶ್ವರ್

ಡಿ.19ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರ ವಿರುದ್ಧ ಅತೀ ಕೀಳುಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದಾರೆ. ಇದು ನಾಡಿನ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ ಮಾಡಿರುವ ಅಪಮಾನವಾಗಿದೆ. ಆದ್ದರಿಂದ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com