ಸಿ.ಟಿ ರವಿ ಸುತ್ತಾಡಿಸಿದ ಪ್ರಕರಣ: ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಸಸ್ಪೆಂಡ್

ಕರ್ತವ್ಯ ಲೋಪದಡಿ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
C T Ravi
ಸಿ ಟಿ ರವಿ
Updated on

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ವಿಚಾರ ಸಂಬಂಧ ಎಂಎಲ್ ಸಿ ಸಿ.ಟಿ ರವಿ ಅವರನ್ನ ಬಂಧಿಸಿ ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆತಂಡವಾಗಿದೆ.

ಕರ್ತವ್ಯ ಲೋಪದಡಿ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿದ್ದಕ್ಕೆ ಅಮಾನತು ಮಾಡಲಾಗಿದೆ ಎನ್ನಲಾಗಿದೆ.

ಸಿಟಿ ರವಿ ಬಂಧನ ನಂತರ ಬಿಜೆಪಿ ನಾಯರಕನ್ನ ಠಾಣೆಯೊಳಗೆ ಬಿಟ್ಟಿದ್ದರು. ಈ ವೇಳೆ ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರು ಸಭೆ ಮಾಡಿದ್ದರು. ಆಗ ಕಮಿಷನರ್ ಯಡಾಮಾರ್ಟಿನ್ ಡಿಸಿಪಿ ರೋಹನ್ ಇದ್ದರು. ಕಮಿಷನರ್ ಅನುಮತಿ ಮೇರೆಗೆ ಬಿಜೆಪಿ ನಾಯಕರನ್ನ ಠಾಣೆಯೊಳಗೆ ಬಿಟ್ಟಿದ್ದರು ಎನ್ನಲಾಗಿದೆ.

C T Ravi
ನನ್ನ ಜೀವಕ್ಕೆ ಅಪಾಯವಿದೆ, ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಸಿ ಟಿ ರವಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com