ಸಿಟಿ ರವಿಯನ್ನು ಟೆರರಿಸ್ಟ್ ರೀತಿ ನಡೆಸಿಕೊಳ್ಳಲಾಗಿದೆ: ನ್ಯಾಯಾಂಗ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು.
BJP delegation met Karnataka Governor Thaawarchand Gehlot
ರಾಜ್ಯಪಾಲರನ್ನು ಭೇಟಿ ಮಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಮತ್ತು ಶಾಸಕರು
Updated on

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ನಂತರ ಮಂಗಳವಾರ ಮಾತನಾಡಿದ ಅವರು, ಸಿಟಿ ರವಿ ಅವರನ್ನು ಬಂಧಿಸಲಾಯಿತು ಮತ್ತು ರಾತ್ರಿಯಿಡೀ ಊಟ-ನೀರು ನೀಡದೆ ಅಲ್ಲಿಂದಿಲ್ಲಿಗೆ ಓಡಾಡಿಸಲಾಗಿದೆ. ಅವರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಯಿತು ಎಂದು ದೂರಿದರು.

ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಮತ್ತು ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಿಟಿ ರವಿ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದೇವೆ ಎಂದರು.

ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು. ಕರ್ನಾಟಕ ಹೈಕೋರ್ಟ್ ಶುಕ್ರವಾರ ನೀಡಿದ ಮಧ್ಯಂತರ ಆದೇಶದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com