ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್

ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದ ಮುನಿರತ್ನ ಅವರು, ಇಂದು ಬೆಳಗ್ಗೆ ಡಿಸ್ಚಾರ್ಜ್‌ ಆಗಿದ್ದಾರೆ.
MLA Munirathna
ಶಾಸಕ ಮುನಿರತ್ನ
Updated on

ಬೆಂಗಳೂರು: ಮೊಟ್ಟೆ ಎಸೆತ ಘಟನೆಯಲ್ಲಿ ಗಾಯಗೊಂಡಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು, ಮಲ್ಲೇಶ್ವರದ ಕೆಸಿ ಜನರಲ್‌ ಆಸ್ಪತ್ರೆಯಿಂದ ಗುರುವಾರ ಬಿಡುಗಡೆಯಾಗಿದ್ದಾರೆ.

ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದ ಮುನಿರತ್ನ ಅವರು, ಇಂದು ಬೆಳಗ್ಗೆ ಡಿಸ್ಚಾರ್ಜ್‌ ಆಗಿದ್ದಾರೆ.

ಆಸ್ಪತ್ರೆಯಿಂದ ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಈಗ ನಾನು ಏನು ಹೇಳುವುದಿಲ್ಲ. ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದರು.

ಗುರುವಾರ ಲಗ್ಗೆರೆ ವಾರ್ಡ್‌ನಲ್ಲಿರುವ ಲಕ್ಷ್ಮಿ ದೇವಿ ನಗರದಲ್ಲಿ ವಾಜಪೇಯಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದಾಗ ಶಾಸಕರ ಮೇಲೆ ಮೊಟ್ಟೆ ದಾಳಿ ನಡೆದಿತ್ತು. ಕೂಡಲೇ ದಾಳಿಕೋರರನ್ನು ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ದಾಳಿ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಹನುಮಂತರಾಯಪ್ಪ ಇದ್ದಾರೆ. ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆ ಆಗುತ್ತಿತ್ತು ಎಂದು ಮುನಿರತ್ನ ಅವರು ಆರೋಪಿಸಿದ್ದಾರೆ.

MLA Munirathna
ಮುನಿರತ್ನ ಮೇಲೆ ಮೊಟ್ಟೆ ದಾಳಿ: ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ; BJP ತೀವ್ರ ಖಂಡನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com