ಹಿನ್ನೋಟ 2024: ಶಿಕ್ಷಣ ಇಲಾಖೆಯಲ್ಲಿ ಯಶಸ್ವಿ ಸುಧಾರಣೆಗಳು, ಉಳಿದಿರುವ ಸವಾಲುಗಳು

2024 ರಲ್ಲಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳನ್ನು ಪರಿಚಯಿಸಲಾಯಿತು, ಇದು ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 2024ನೇ ಇಸವಿ ಮುಗಿಯುತ್ತಾ ಬಂದಿದ್ದು, ಕರ್ನಾಟಕ ಶಿಕ್ಷಣ ಇಲಾಖೆ ಭರವಸೆ ಉಳಿಸಿಕೊಂಡಿದ್ದು, ಹಲವಾರು ಪ್ರಮುಖ ಉಪಕ್ರಮಗಳನ್ನು ಹೊರತಂದಿದೆ. ಮೂರು ಅವಧಿಯ ಪರೀಕ್ಷಾ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ಹಿಡಿದು ಸಾರ್ವಜನಿಕ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಮೂರು ವರ್ಷಗಳ ಪದವಿ ಕಾರ್ಯಕ್ರಮವನ್ನು ಮರುಸ್ಥಾಪಿಸುವವರೆಗೆ, ಇಲಾಖೆಯು ತಾನು ಮಾಡಲು ಯೋಜಿಸಿದ್ದನ್ನು ಸಾಧಿಸಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇರುವ ಹಲವಾರು ಸವಾಲುಗಳನ್ನು ಎದುರಿಸಲು ಇದು ಸಾಕಾಗುವುದಿಲ್ಲ.

ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಬಹುಮುಖ್ಯವಾಗಿದ್ದರೂ, ಶಿಕ್ಷಣ ಇಲಾಖೆಯು ದೀರ್ಘಕಾಲದ ಅಂತರವನ್ನು ಪರಿಹರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆ, ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಂಖ್ಯೆ, ಕುಸಿಯುತ್ತಿರುವ ಶಾಲಾ ಮೂಲಸೌಕರ್ಯ ಮತ್ತು ಸಂಶೋಧನೆಗಳಿಂದ ಸಿಗುವ ಫಲಿತಾಂಶದಲ್ಲಿ ನೀರಸತೆಗಳಂತಹ ಸವಾಲುಗಳನ್ನು ಪರಿಹರಿಸಲಾಗಿಲ್ಲ.

2024 ರಲ್ಲಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳನ್ನು ಪರಿಚಯಿಸಲಾಯಿತು, ಇದು ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಈ ಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಸುಧಾರಿಸಲು ಬಹು ಅವಕಾಶಗಳನ್ನು ಒದಗಿಸುತ್ತದೆ, ಇದು ಅಂತಹ ವ್ಯವಸ್ಥೆಯ ದೀರ್ಘಕಾಲೀನ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ಮಾರ್ಚ್, ಮೇ ಮತ್ತು ಆಗಸ್ಟ್‌ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸುವ ಮೂಲಕ, ಶಿಕ್ಷಣ ಇಲಾಖೆಯು ಒತ್ತಡವನ್ನು ನಿವಾರಿಸಲು ಆಶಯವನ್ನು ಹೊಂದಿದ್ದರೂ ಕೂಡ ಹೆಚ್ಚಿದ ಒತ್ತಡಕ್ಕೆ ಕಾರಣವಾಗಬಹುದು ಏಕೆಂದರೆ ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಅನೇಕ ಪ್ರಯತ್ನಗಳನ್ನು ನಡೆಸುವಂತೆ ಇದು ಮಾಡಬಹುದು.

2024 ರ ಆರಂಭದಲ್ಲಿ, ಇಲಾಖೆಯು ಸುತ್ತೋಲೆ ಹೊರಡಿಸಿ ತಾಲ್ಲೂಕು ಮತ್ತು ಬ್ಲಾಕ್ ಮಟ್ಟದ ಅಧಿಕಾರಿಗಳು ಜೂನ್‌ನಿಂದ ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತರಲು ಕಡ್ಡಾಯ ಜಾಗೃತಿ ಅಭಿಯಾನಗಳನ್ನು ನಡೆಸಬೇಕು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಇಲಾಖಾ ಅಧಿಕಾರಿಗಳಿಗೆ ಮೇ ತಿಂಗಳೊಳಗೆ ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಿಸುವಂತೆ ಸೂಚಿಸಿದರು. ಈ ಕ್ರಮಗಳನ್ನು ಜಾರಿಗೆ ತಂದಾಗ, ವಾಸ್ತವವು ವಿಭಿನ್ನ ಕಥೆಯನ್ನು ಹೇಳುತ್ತದೆ.

Representational image
ಹಿನ್ನೋಟ 2024: ಕೆಲವು ಅನಾರೋಗ್ಯಕರ ಘಟನೆಗಳ ಮಧ್ಯೆ ಆರೋಗ್ಯ ಇಲಾಖೆಯ ಜನಪರ ಉಪಕ್ರಮಗಳು

ಅನೇಕ ಶಾಲೆಗಳು ಮೂಲಸೌಕರ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ವಿದ್ಯಾರ್ಥಿಗಳನ್ನು ಮರಳಿ ಕರೆತರುವ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶಗಳನ್ನು ನೀಡಿಲ್ಲ. ಸಮಗ್ರ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಹೊಸ ಪಠ್ಯಕ್ರಮದ ಚೌಕಟ್ಟುಗಳು ಮತ್ತು ಕ್ರಿಯಾ ಯೋಜನೆಗಳನ್ನು ಪರಿಚಯಿಸಲಾಯಿತು, ಶಾಲೆಗಳು, ಪೂರ್ವ-ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಖಾಲಿ ಹುದ್ದೆಗಳನ್ನು ಸರ್ಕಾರವು ಸರಿಯಾಗಿ ಭರ್ತಿ ಮಾಡುತ್ತಿಲ್ಲ. ಇದರಿಂದ ಶಿಕ್ಷಣ ವ್ಯವಸ್ಥೆ ದುರ್ಬಲವಾಗುತ್ತಿದೆ.

ಈ ವರ್ಷ, ಇಲಾಖೆಯು ಇಂಗ್ಲೆಂಡಿನ ಚೆವೆನಿಂಗ್ ಸ್ಕಾಲರ್‌ಶಿಪ್ ಕಾರ್ಯಕ್ರಮದೊಂದಿಗೆ ಎಂಒಯುಗೆ ಸಹಿ ಹಾಕಿದೆ, ಇಂಗ್ಲೆಂಡ್ ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆಯಲು ಮಹಿಳಾ ಪದವೀಧರರಿಗೆ ಅನನ್ಯ ವಿದ್ಯಾರ್ಥಿವೇತನವನ್ನು ನೀಡುವ ಮೊದಲ ದಕ್ಷಿಣ ರಾಜ್ಯವಾಗಿದೆ. ಇದು ಪ್ರಗತಿಪರ ಕ್ರಮವಾಗಿ ಕಾಣಿಸಬಹುದಾದರೂ, ಇಲಾಖೆಯು ನಿರ್ಣಾಯಕ ವಾಸ್ತವವನ್ನು ಗ್ರಹಿಸಲು ವಿಫಲವಾಗಿದೆ.

ಅನೇಕ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಿಬ್ಬಂದಿ ಕೊರತೆ, ಕಳಪೆ ಮೂಲಸೌಕರ್ಯ ಮತ್ತು ಹಳೆಯ ಪಠ್ಯಕ್ರಮಗಳು ಮುಂದುವರಿದರೆ - ಅಂತಹ ಅವಕಾಶಗಳು ಹೆಚ್ಚಿನ ವಿದ್ಯಾರ್ಥಿಗಳಿಗೆ ತಲುಪುವುದಿಲ್ಲ. ಪ್ರತಿಷ್ಠಿತ ವಿದ್ಯಾರ್ಥಿವೇತನಕ್ಕೆ ಅಭ್ಯರ್ಥಿಗಳನ್ನು ಸಿದ್ಧಪಡಿಸುವುದು ಅರ್ಥಹೀನವಾಗಿದೆ.

Representational image
ಹಿನ್ನೋಟ 2024: ಇಸ್ರೋ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮ ಸಾಧನೆಗಳು

ಸರ್ಕಾರಿ ಶಾಲೆಗಳು ವರ್ಷದಿಂದ ವರ್ಷಕ್ಕೆ ಕಠಿಣವಾಗುತ್ತಾ ಹೋಗುತ್ತಿದೆ. ಮೂಲಸೌಕರ್ಯ, ಸಿಬ್ಬಂದಿ ಮತ್ತು ಸಂಪನ್ಮೂಲಗಳಲ್ಲಿನ ನಿರಂತರ ವೈಫಲ್ಯಗಳು ವಿದ್ಯಾರ್ಥಿಗಳ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತವೆ.

ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಗುರುತಿಸಲು ಪರಿಣಾಮಕಾರಿ ಮೇಲ್ವಿಚಾರಣಾ ವ್ಯವಸ್ಥೆಗಳು, ನೀತಿಗಳು ಕಾರ್ಯನಿರ್ವಹಿಸುತ್ತಿವೆಯೇ ಎಂದು ನಿರ್ಣಯಿಸುವುದು ಮತ್ತು ಹೆಚ್ಚಿನ ಶಾಲೆಗಳನ್ನು ಮುಚ್ಚುವುದನ್ನು ತಡೆಯಲು ವಿಷಯ-ನಿರ್ದಿಷ್ಟ ಶಿಕ್ಷಕರ ಬೆಂಬಲವನ್ನು ಖಾತ್ರಿಪಡಿಸುವುದು ಅತ್ಯಗತ್ಯ.

ಈ ಉಪಕ್ರಮಗಳು ಈಗಾಗಲೇ ಶೋಚನೀಯ ಸ್ಥಿತಿಯಲ್ಲಿರುವ ಶಾಲೆಗಳನ್ನು ಮುಚ್ಚಿದವರ ಪಟ್ಟಿಗೆ ಸೇರಿಸುವುದನ್ನು ತಡೆಯುವ ಏಕೈಕ ಮಾರ್ಗವಾಗಿದೆ. ಶಿಕ್ಷಣ ವ್ಯವಸ್ಥೆ ಮತ್ತಷ್ಟು ಹದಗೆಡುವುದನ್ನು ತಡೆಗಟ್ಟಲು ಮತ್ತು ಪ್ರತಿ ವಿದ್ಯಾರ್ಥಿಗೆ ಅವಕಾಶವನ್ನು ನೀಡಲು ತಕ್ಷಣದ ಕ್ರಮವು ನಿರ್ಣಾಯಕವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com