ಪೂಂಛ್‌ನಲ್ಲಿ ಕಂದಕಕ್ಕೆ ಉರುಳಿದ್ದ ಸೇನಾ ವಾಹನ: ಕೊಡಗು ಯೋಧ ದಿವಿನ್ ಸ್ಥಿತಿ ಚಿಂತಾಜನಕ

ದಿವಿನ್‌ ಅವರಿಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿದ್ದು, ಫೆಬ್ರವರಿಯಲ್ಲಿ ಮದುವೆ ಸಮಾರಂಭ ನಿಗದಿಯಾಗಿದೆ.
Army Vehicle
ಕಂದಕಕ್ಕೆ ಉರುಳಿದ್ದ ಸೇನಾ ವಾಹನ
Updated on

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ ಪಿ.ಪಿ.ದಿವಿನ್ ಅವರ ಸ್ಥಿತಿ ಗಂಭೀರವಾಗಿದೆ.

ದಿವಿನ್ ಪೋಷಕರು ಪುತ್ರನನ್ನು ನೋಡಲು ಜಮ್ಮವಿನ ಉದಮ್‌ಪುರಕ್ಕೆ ತೆರಳಿದ್ದಾರೆ. ಗ್ರಾಮದ ಪಳಂಗೋಟು ಪ್ರಕಾಶ್ ಮತ್ತು ಜಯ ದಂಪತಿಯ ಏಕೈಕ ಪುತ್ರ ದಿವಿನ್ 10 ವರ್ಷಗಳ ಹಿಂದೆ ಭೂ ಸೇನೆಗೆ ಸೇರಿದ್ದರು.

ದಿವಿನ್‌ ಅವರಿಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿದ್ದು, ಫೆಬ್ರವರಿಯಲ್ಲಿ ಮದುವೆ ಸಮಾರಂಭ ನಿಗದಿಯಾಗಿದೆ.

ವೈದ್ಯರ ಜೊತೆ ಮಡಿಕೇರಿ ಶಾಸಕ‌ ಮಂಥರ್ ಗೌಡ ಮಾತುಕತೆ ನಡೆಸಿ ಮಾಹಿತಿ ಪಡೆದರು. ತನ್ನ ಕ್ಷೇತ್ರದ ಸೈನಿಕನ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಶಾಸಕ ಮಂಥರ್ ಗೌಡ, ದೂರವಾಣಿ ಮೂಲಕ ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com