ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ

2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಮಣ್ ಗುಪ್ತ-ಇಶಾ ಪಂತ್
ರಮಣ್ ಗುಪ್ತ-ಇಶಾ ಪಂತ್
Updated on

ಬೆಂಗಳೂರು: ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್​ ಸರ್ಜರಿ ಮಾಡಿದ್ದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಎಸ್​ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

IPS ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ

ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ, ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ), ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ, ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು), ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು, ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ, ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ, ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ, ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ, ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್​ಇ, ಬೆಂಗಳೂರು, ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್​ಪಿಯಾಗಿ ಮುಂದುವರಿಕೆ, ಎನ್​ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ-ಧಾರವಾಡ ನಗರ, ಡಾ.ವೈ.ಎಸ್. ರವಿ ಕುಮಾರ್: ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್​ ಆಗಿ ಬಡ್ತಿ (ಇಂಟಲಿಜೆನ್ಸ್), ಬೆಂಗಳೂರು.

ರಮಣ್ ಗುಪ್ತ-ಇಶಾ ಪಂತ್
ಕೊಡಗು: ಉಡುಪು ವಿಚಾರಕ್ಕೆ ದೇಗುಲ ಪ್ರವೇಶ ನಿರ್ಬಂಧ, ಸಂಘರ್ಷ; ಸೂಕ್ತ ತೀರ್ಮಾನಕ್ಕೆ ಬರಲು ಜನವರಿ 6 ರವರೆಗೆ ಕಾಲಾವಕಾಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com