ಬೆಂಗಳೂರು: ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ, ಬೇಡ ಎಂದ ಪುತ್ರನ ಹತ್ಯೆಗೈದ ತಂದೆ!

ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ ಮಾಡಲು ಬಿಡದ ಕಾರಣಕ್ಕೆ ತಂದೆಯೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆಯೊಂದು ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ ಮಾಡಲು ಬಿಡದ ಕಾರಣಕ್ಕೆ ತಂದೆಯೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆಯೊಂದು ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಗೋವಿಂದರಾಜು ಮೃತ ದುರ್ದೈವಿ. ಹತ್ಯೆ ಮಾಡಿದಾತನನ್ನು ನಾಗರಾಜು ಅಲಿಯಾಸ್ ವೆಂಕಟರಾಜು ಎಂದು ಗುರ್ತಿಸಲಾಗಿದೆ.

ಮದ್ಯದ ಚಟಕ್ಕೆ ಬಿದ್ದಿದ್ದ ನಾಗರಾಜು, ಮದ್ಯ ಸೇವನೆ ಮಾಡು ಪತ್ನಿ ಗೌರಮ್ಮಗೆ ನಾಟಿಕೋಳಿ ಸಾರು ಮಾಡುವಂತೆ ತಿಳಿಸಿದ್ದಾನೆ. ಇದಕ್ಕೆ ಬೇಸರಗೊಂಡ ಪುತ್ರ ಗೋವಿಂದರಾಜು ಅಡುಗೆ ಮಾಡದಂತೆ ತಾಯಿಯನ್ನು ತಡೆದಿದ್ದಾನೆ.

ಈ ವೇಳೆ ಕೆಂಡಾಮಂಡಲಗೊಂಡಿರುವ ನಾಗರಾಜು ಪುತ್ರ ಗೋವಿಂದರಾಜುಗೆ ಹೊಡೆದು ನಿಂದಿಸಿದ್ದಾನೆ. ಬಳಿಕ ಮನೆಯಿಂದ ಹೊರಗೆ ಹೋಗಿದ್ದಾನೆ. ಮಧ್ಯರಾತ್ರಿ 12.30ರ ಸುಮಾರಿಗೆ ಮರಳಿ ಮನೆಗೆ ಬಂದಿರುವ ಆರೋಪಿ, ಪುತ್ರ ಮಲಗಿರುವುದನ್ನು ನೋಡಿ ಕಲ್ಲು ತಂದು ತಲೆ ಮೇಲೆ ಎತ್ತಿ ಹಾಕಿದ್ದಾನೆ. ಶಬ್ಧ ಕೇಳಿದ ಗೌರಮ್ಮ ನಿದ್ರೆಯಿಂದ ಎದ್ದು, ಕೂಗಿಕೊಂಡಿದ್ದಾರೆ.

ಕೂಡಲೇ ಸ್ಥಳೀಯರ ನೆರವಿನೊಂದಿಗೆ ಪುತ್ರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ಬದುಕುಳಿಯುವ ಸಾಧ್ಯತೆ ಅತ್ಯಂತ ವಿರಳ ಎಂದು ಹೇಳಿದರೂ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಗೋವಿಂದರಾಜು ಅವರು ಕೊನೆಯುಸಿರೆಳೆದಿದ್ದಾರೆ. ಈ ನಡುವೆ ಪುತ್ರನನ್ನು ಹತ್ಯೆ ಮಾಡಿದ ನಾಗರಾಜು ಪೊಲೀಸರ ಮುಂದೆ ಶರಣಾಗಿದ್ದಾನೆ.

ಆರೋಪಿ ನಾಗರಾಜು ಹಾಗೂ ಈನತ ಪತ್ನಿ ಗೌರಮ್ಮ ಅವರಿಗೆ ಮತ್ತೊಬ್ಬ ಮಗನಿದ್ದ. ಆದರೆ, ಕ್ಯಾನ್ಸರ್ ನಿಂದಾಗಿ ಆತ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com