ಕನಕಪುರ ಚುನಾವಣಾಧಿಕಾರಿ ಆತ್ಮಹತ್ಯೆ ಪ್ರಕರಣ: ಮಾನಸಿಕ ಕಿರುಕುಳ ನೀಡಿದ್ದ ಅಧಿಕಾರಿ ಬಂಧನ

ಸಹೋದ್ಯೋಗಿಯೊಬ್ಬರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ್ ಅವರನ್ನು ಕನಕಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸಹೋದ್ಯೋಗಿಯೊಬ್ಬರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ್ ಅವರನ್ನು ಕನಕಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪೂರ್ಣಿಮಾ (50) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ. ಟಿಡಿಸಿ ಕಾರ್ಯಕರ್ತ ಟಿಎನ್ ಸುರೇಶ್ (54) ಕಳೆದ ಎಂಟು ವರ್ಷಗಳಿಂದ ಚುನಾವಣಾ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಚುನಾವಣಾ ಶಾಖೆಯ ಕೊಠಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಸಂಜೆ 4.40ರ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.

ವಕೀಲ ಪಾಪಣ್ಣ ರಸ್ತೆ ನಿವಾಸಿ ಸುರೇಶ್ ಅವರ ಪತ್ನಿ ಆರ್ ರೇಖಾ (43) ಅವರು ಪೂರ್ಣಿಮಾ ವಿರುದ್ಧ ದೂರು ದಾಖಲಿಸಿದ್ದಾರೆ. ಪೂರ್ಣಿಮಾ ಅವರು ನೀಡಿದ ಮಾನಸಿಕ ಕಿರುಕುಳದಿಂದ ತನ್ನ ಪತಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ತನ್ನ ಪತಿಯನ್ನು ಕೆಲಸದಿಂದ ವಜಾಗೊಳಿಸುವ ಬೆದರಿಕೆಯ ನೋಟಿಸ್‌ನ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ, ಸುರೇಶ್ ಅವರ ಸಾವಿಗೆ ಶಿರಸ್ತೇದಾರ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com