ಫೆ.8ರಂದು ವಿಧಾನಸೌಧದ ಆವರಣದಲ್ಲಿ 2ನೇ ಜನಸ್ಪಂದನಾ ಕಾರ್ಯಕ್ರಮ; ಸದುಪಯೋಗಪಡಿಸಿಕೊಳ್ಳಿ ಎಂದು ಸಿಎಂ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಗುರುವಾರ, ಫೆಬ್ರವರಿ 8 ರಂದು ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಸೋಮವಾರ ಮನವಿ ಮಾಡಿದ್ದಾರೆ.
ಜನಸ್ಪಂದನಾ ಕಾರ್ಯಕ್ರಮ
ಜನಸ್ಪಂದನಾ ಕಾರ್ಯಕ್ರಮ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಗುರುವಾರ, ಫೆಬ್ರವರಿ 8 ರಂದು ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಸೋಮವಾರ ಮನವಿ ಮಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಫೆಬ್ರವರಿ 8ರ ಗುರುವಾರದಂದು ವಿಧಾನಸೌಧ ಆವರಣದಲ್ಲಿ ನನ್ನ ನೇತೃತ್ವದಲ್ಲಿ ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ನೇರವಾಗಿ ನನ್ನ ಬಳಿ ಸಲ್ಲಿಸಬಹುದಾಗಿದ್ದು, ಅವುಗಳಿಗೆ ಸ್ಥಳದಲ್ಲೇ ಅಥವಾ ಕಾಲಮಿತಿಯೊಳಗೆ ಪರಿಹಾರ ಗ್ಯಾರಂಟಿ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಇದರ ಸದುಪಯೋಗ ಪಡೆಯಬೇಕೆಂದು ಮನವಿ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com