ಮಂಗಳೂರು ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ: ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿರುವ ಪಣಂಬೂರು ಬೀಚ್‌ನಲ್ಲಿ ವರದಿಯಾದ ನೈತಿಕ ಪೊಲೀಸ್‌ಗಿರಿ ಮತ್ತು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.
ಪಣಂಬೂರು ಬೀಚ್  (ಸಾಂದರ್ಭಿಕ ಚಿತ್ರ)
ಪಣಂಬೂರು ಬೀಚ್ (ಸಾಂದರ್ಭಿಕ ಚಿತ್ರ)

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿರುವ ಪಣಂಬೂರು ಬೀಚ್‌ನಲ್ಲಿ ವರದಿಯಾದ ನೈತಿಕ ಪೊಲೀಸ್‌ಗಿರಿ ಮತ್ತು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಮಂಗಳೂರು ನಗರದ ಹೊರವಲಯದ ಪಣಂಬೂರು ಬೀಚ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳ ಮೂಲದ ಪುರುಷ ಮತ್ತು ಬೆಂಗಳೂರು ಮೂಲದ ಮಹಿಳೆ ದಂಪತಿಗಳಾಗಿದ್ದು, ಪಣಂಬೂರು ಬೀಚ್ ನಲ್ಲಿ ತಿರುಗಾಡುತ್ತಿದ್ದಾಗ ಬಲಪಂಥೀಯ ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ಧರ್ಮಗಳಿಗೆ ಸೇರಿದವರಾಗಿದ್ದು ಏಕೆ ಒಟ್ಟಿಗೆ ಇದ್ದಾರೆ ಎಂದು ಪ್ರಶ್ನಿಸಿದರು.

ಈ ವಿಚಾರ ತಿಳಿದ ಕೂಡಲೇ ಪಣಂಬೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ನಂತರ, ಪ್ರಾಥಮಿಕ ವಿಚಾರಣೆಯ ನಂತರ, ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com