ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪದ ಮೇರೆಗೆ ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ರಾಜರಾಜೇಶ್ವರಿ ನಗರದಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.
16 ಎಕರೆ ಜಮೀನು ಕಬಳಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದ್ದು, ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಜಮೀನು ಕಬಳಿಸಿದ ಆರೋಪದ ಮೇಲೆ ಬಸವರಾಜ್ ಎಂಬುವರು ದೂರು ನೀಡಿದ್ದರು. ಕೃಷ್ಣಪ್ಪನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Advertisement