ಚಿಕ್ಕಮಗಳೂರು: ಡೆಂಗ್ಯೂಗೆ ಕಾಲೇಜು ವಿದ್ಯಾರ್ಥಿನಿ ಬಲಿ!

ಚಿಕ್ಕಮಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿ ಸುಹಾನ ಬಾನು
ಮೃತ ವಿದ್ಯಾರ್ಥಿನಿ ಸುಹಾನ ಬಾನು
Updated on

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಮೊಹಮ್ಮದ್ ಖಾನ್ ಲೇನ್ ನಿವಾಸಿ 18 ವರ್ಷದ ಸುಹಾನಾ ಭಾನು ಮೃತ ವಿದ್ಯಾರ್ಥಿನಿ. ಚಿಕಿತ್ಸೆಗೆಂದು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಸುಹಾನಾ ಇಂದು ಮೃತಪಟ್ಟಿದ್ದಾರೆ.

ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. 

ಇದರ ಮಧ್ಯೆಯೇ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ ಕ್ರಮವಾಗಿ ಹೆಚ್ಚುತ್ತಿದೆ. ಕೊಪ್ಪ ಸರಕಾರಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಇಲಾಖೆ ಪ್ರತ್ಯೇಕ ವಾರ್ಡ್ ನಿರ್ಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com