SSLC ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮುಸ್ಲಿಮರ ತುಷ್ಠೀಕರಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ ದಾಖಲಾಗಿದೆ. 
ಚಕ್ರವರ್ತಿ ಸೂಲಿಬೆಲೆ(ಸಂಗ್ರಹ ಚಿತ್ರ)
ಚಕ್ರವರ್ತಿ ಸೂಲಿಬೆಲೆ(ಸಂಗ್ರಹ ಚಿತ್ರ)

ಶಿವಮೊಗ್ಗ: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ ದಾಖಲಾಗಿದೆ. 

ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ(SSLC exam time table) ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಎನ್​ಎಸ್​ವಿ ಸದಸ್ಯರು ದೂರು ನೀಡಿದ್ದರು. 

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಸಮಯಾವಕಾಶ ನೀಡಲು ಬೆಳಗ್ಗಿನ ಪರೀಕ್ಷೆಗಳನ್ನು ಮಧ್ಯಾಹ್ನದ ನಂತರ ನಿಗದಿ ಮಾಡಲಾಗಿದೆ. ಪರೀಕ್ಷಾ ವೇಳಾಪಟ್ಟಿ ಹಂಚಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ, ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗಿನ ಅವಧಿಯಲ್ಲಿ ನಡೆಯಲಿದೆ. ಶುಕ್ರವಾರ ಮಾತ್ರ ಏಕೆ ಮಧ್ಯಾಹ್ನದ ನಂತರ ಎಂದು ಪ್ರಶ್ನಿಸಿದ್ದರು. ಅಲ್ಲದೆ, ನಮಾಜ್​ಗೆ ಸಮಯವೇ ಎಂದು ಪ್ರಶ್ನಿಸಿದ್ದರು.

ಪರೀಕ್ಷಾ ಮಂಡಳಿ ಏನು ಹೇಳಿದೆ?: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ, ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ. ನಮಾಜ್​ಗೆ ಅನುಕೂಲ ಮಾಡಿಕೊಡಲು ಮಧ್ಯಾಹ್ನ ಪರೀಕ್ಷೆ ನಡೆಸುತ್ತಿಲ್ಲ ಎಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಸ್ಪಷ್ಟನೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com