ಬರ ಪರಿಹಾರ: ರಾಜ್ಯದ 33 ಲಕ್ಷ ರೈತರಿಗೆ 628 ಕೋಟಿ ರೂ. ಬಿಡುಗಡೆ- ಕೃಷ್ಣ ಬೈರೇಗೌಡ

ವಿಧಾನಮಂಡಲ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಬರಪೀಡಿತ ರೈತರಿಗೆ ಪರಿಹಾರವಾಗಿ 628 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ  ಘೋಷಿಸಿದ್ದಾರೆ. ಮೊದಲ ಕಂತಿನಲ್ಲಿ ಪ್ರತಿ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ  ರೂ,2,000 ಜಮೆ ಮಾಡಲಾಗಿದೆ.
ಕೃಷ್ಣಬೈರೇಗೌಡ
ಕೃಷ್ಣಬೈರೇಗೌಡ
Updated on

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಬರಪೀಡಿತ ರೈತರಿಗೆ ಪರಿಹಾರವಾಗಿ 628 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ  ಘೋಷಿಸಿದ್ದಾರೆ. ಮೊದಲ ಕಂತಿನಲ್ಲಿ ಪ್ರತಿ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ  ರೂ,2,000 ಜಮೆ ಮಾಡಲಾಗಿದೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೈರೇಗೌಡ, 33 ಲಕ್ಷ ರೈತರಿಗೆ ಭಾಗಶಃ ಪರಿಹಾರ ಬಿಡುಗಡೆ ಮಾಡಿದ್ದು, 1.6 ಲಕ್ಷ ರೈತರ ಬ್ಯಾಂಕ್ ಖಾತೆಗಳನ್ನು ಸರಳೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಅದು ಮುಗಿದ ನಂತರ ಈ ರೈತರಿಗೂ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂದರು.

ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ತರಲು ಎಲ್ಲ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಹಣ ಪಡೆದ ರೈತರ ಪಟ್ಟಿಯನ್ನು ಬಹಿರಂಗಗೊಳಿಸುವಂತೆ ಸೂಚಿಸಲಾಗಿದೆ. ಯಾವುದೇ ಹೆಸರು ಸೇರ್ಪಡೆಯಾಗದ ರೈತರು ಇದ್ದಲ್ಲಿ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಚಿವರು ತಿಳಿಸಿದರು.

ಈಗಾಗಲೇ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು,  ಕುಡಿಯುವ ನೀರು ಮತ್ತು ಮೇವು ಪೂರೈಸಲು ಸರ್ಕಾರ ಈಗಾಗಲೇ 870 ಕೋಟಿ ರೂ. ಬಿಡುಗಡೆ ಮಾಡಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಈ ಪ್ರತಿಯೊಂದು ತಾಲೂಕಿನಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದೆ. ಸಭೆ ನಡೆಸಿ, ಹಲವೆಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

18,178 ಕೋಟಿ ಪರಿಹಾರ ಕೋರಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ನಾಲ್ಕು ತಿಂಗಳು ಕಳೆದರೂ ಹಣ ನೀಡಿಲ್ಲ, ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ, ರೈತರಿಗೆ ಪರಿಹಾರ ಘೋಷಿಸಿದರೆ ರೈತ ಸಮುದಾಯಕ್ಕೆ ಸ್ವಲ್ಪ ಬಿಡುವು ಸಿಗುತ್ತದೆ ಎಂದು ಸಚಿವರು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com