ಬೆಂಗಳೂರು: 24 ವರ್ಷಗಳ ನಂತರ ಸರಗಳ್ಳನ ಬಂಧನ

ಸರಗಳ್ಳತನ ಪ್ರಕರಣದಲ್ಲಿ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 1998ರಲ್ಲಿ ಗುಲಾಬ್ ಖಾನ್ ಅಲಿಯಾಸ್ ಗುಲ್ಲು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಗುಲಾಬ್ ಖಾನ್
ಆರೋಪಿ ಗುಲಾಬ್ ಖಾನ್
Updated on

ಬೆಂಗಳೂರು: ಸರಗಳ್ಳತನ ಪ್ರಕರಣದಲ್ಲಿ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 1998ರಲ್ಲಿ ಗುಲಾಬ್ ಖಾನ್ ಅಲಿಯಾಸ್ ಗುಲ್ಲು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಡುಗಡೆಯಾದ ನಂತರ, ಪ್ರಕರಣವನ್ನು ಎರಡನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ಆದರೆ ಅಂದಿನಿಂದ ಅವರು ಯಾವುದೇ ವಿಚಾರಣೆಗೆ ಹಾಜರಾಗಲಿಲ್ಲ. ನ್ಯಾಯಾಲಯವು ಸಮನ್ಸ್, ವಾರಂಟ್ ಮತ್ತು ಘೋಷಣೆಗಳನ್ನು ಹೊರಡಿಸಿತು ಮತ್ತು ಪ್ರಕರಣವು ಸುಮಾರು 24 ವರ್ಷಗಳಿಂದ ಬಾಕಿ ಉಳಿದಿತ್ತು.

ಗುಲಾಬ್ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನೆಲೆಸಿದ್ದ ಎಂಬ ಮಾಹಿತಿ ಸಿಕ್ಕಿತು. ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ, ಪೊಲೀಸರು ಫೆಬ್ರವರಿ 3 ರಂದು ಬೆಳಿಗ್ಗೆ 4 ಗಂಟೆಗೆ ತಿಲಕ್ ನಗರದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದರು. ಗುಲ್ಲು ಕನಕಪುರ ಟೌನ್ ಪುರಸಭೆಯೊಂದಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು ಕಂಡುಬಂದಿದೆ.

ಗುಲ್ಲು ಅಪರಾಧ ಮಾಡಿದಾಗ 22 ವರ್ಷ ವಯಸ್ಸು ಈಗ 46 ವರ್ಷ ವಯಸ್ಸಾಗಿದೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಗುಲ್ಲು ಅಪರಾಧದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಆತ ಯಾವುದೇ ಇತರ ಅಪರಾಧಗಳನ್ನು ಮಾಡಿದ್ದಾನೆಯೇ ಎಂದು ಪರಿಶೀಲಿಸಲು ಪೊಲೀಸರು ಫಿಂಗರ್‌ಪ್ರಿಂಟ್ ಪರಿಶೀಲನೆಯನ್ನು ಬಳಸಿದ್ದಾರೆ, ಆದರೆ ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com