'ಶ್ರೀರಾಮ ಒಂದು ಕಲ್ಲು': ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ, ದೂರು ದಾಖಲು

ಶಾಲಾ ಶಿಕ್ಷಕಿಯೊಬ್ಬರು ಅಯೋಧ್ಯಾ ರಾಮ ಮಂದಿರ ಹಾಗೂ ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಶಾಲೆ ಆವರಣದಲ್ಲಿ ಪೋಲೀಸರು.
ಶಾಲೆ ಆವರಣದಲ್ಲಿ ಪೋಲೀಸರು.
Updated on

ಮಂಗಳೂರು: ಶಾಲಾ ಶಿಕ್ಷಕಿಯೊಬ್ಬರು ಅಯೋಧ್ಯಾ ರಾಮ ಮಂದಿರ ಹಾಗೂ ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿಯೊಬ್ಬರು ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಶಾಲೆಯ ಏಳನೇ ತರಗತಿ ಮಕ್ಕಳಿಗೆ ವರ್ಕ್ ಈಸ್ ವರ್ಶಿಪ್ ಎನ್ನುವ ಪಠ್ಯವಿದ್ದು, ಅದರ ನೆಪದಲ್ಲಿ ಹಿಂದು ಧರ್ಮವನ್ನು ನಿಂದಿಸಿ ತರಗತಿಯಲ್ಲಿ ಬೋಧನೆ ಮಾಡಿ, ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆಂದು ತಿಳಿದುಬಂದಿದೆ.

ಹಿಂದುಗಳಿಗೆ ಅಸ್ತಿತ್ವ ಇಲ್ಲ. ಭಾರತದಲ್ಲಿ ಮಾತ್ರ ಹಿಂದುಗಳಿದ್ದಾರೆ. ಹಿಂದುಗಳ ಹುಟ್ಟು ಎಲ್ಲಿಂದಲೇ ಇವರಿಗೆ ತಿಳಿದಿಲ್ಲ. ಅಯೋಧ್ಯೆಯಲ್ಲಿ ಕಲ್ಲಿನ ಮೂರ್ತಿ ಮಾಡಿ ಇಟ್ಟ ಕೂಡಲೇ ಅಲ್ಲಿಗೆ ರಾಮ ಬರುತ್ತಾನೆಯೇ..?  ಮಸೀದಿಯನ್ನು ಒಡೆದು ಡೆಕೋರೇಶನ್ ಮಾಡಿ ಮಂದಿರ ಕಟ್ಟಬೇಕಿತ್ತೇ.? ರಾಮಾಯಣ, ರಾಮ ಎಲ್ಲ ಕಾಲ್ಪನಿಕ. ಅದನ್ನು ಹೇಗೆ ನಂಬುತ್ತೀರಿ ಇತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟು ಮಕ್ಕಳಲ್ಲಿ ಹಿಂದು ಧರ್ಮದ ಬಗ್ಗೆ ಅಪನಂಬಿಕೆ ಬರುವ ರೀತಿ ಮಾಡಿದ್ದಾರೆಂದು ಪೋಷಕರೊಬ್ಬರು ಆರೋಪಿಸಿದ್ದಾರೆ.

ಈ ಬೆಳವಣಿಗೆ ಕಂಡು ಬರುತ್ತಿದ್ದಂತೆಯೇ ಹಿಂದು ಸಂಘಟನೆ ಕಾರ್ಯಕರ್ತರು ಶಾಲೆಯ ಆವರಣಕ್ಕೆ ಬಂದು ಧಿಕ್ಕಾರ ಕೂಗಿದ್ದಾರೆ. ಅಲ್ಲದೆ, ಶಾಲೆಯ ಆಡಳಿತ ಮಂಡಳಿ ಜೊತೆಗೂ ಮಾತನಾಡಿದ್ದು, ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದೇ ವೇಳೆ, ಮಾಜಿ ಎಂಎಲ್ಸಿ ಐವಾನ್ ಡಿಸೋಜ ಶಾಲೆಗೆ ಭೇಟಿ ನೀಡಿದ್ದು, ಸಂಘಟನೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ಬಯಸಿದಾಗ, ಕೆಲವು ಪೋಷಕರು ನನ್ನಲ್ಲಿ ಹಿಂದು ಧರ್ಮದ ದೇವರ ಅವಹೇಳನದ ಬಗ್ಗೆ ಹೇಳಿದ್ದಾರೆ. ಶಾಲಾಡಳಿತ ಜೊತೆಗೆ ಮಾತನಾಡಿದ್ದೇನೆ. ತನಿಖೆ ಮಾಡಿ, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com