ಶಿರಸಿ: ಗೌರಿ ನಾಯ್ಕ ಕೆಲಸಕ್ಕೆ ಅಡ್ಡಿ; ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ!

ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ.
ಬಾವಿ ತೋಡುತ್ತಿದ್ದ  ಮಹಿಳೆ
ಬಾವಿ ತೋಡುತ್ತಿದ್ದ ಮಹಿಳೆ
Updated on

ಶಿರಸಿ: ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಮಾಹಿತಿ ಪ್ರಕಾರ ಬಾವಿ ತೋಡಲು ಯಾವುದೇ ಪರವಾನಗಿ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾದ ಅಧಿಕಾರಿಗಳು, ಬಾವಿ ತೋಡುತ್ತಿದ್ದ ಗೌರಿಯನ್ನು ತಡೆದಿದ್ದಾರೆ ಎಂದು ಸ್ಥಳೀಯರು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳ ಕುಡಿಯುವ ನೀರಿನ ಅವಶ್ಯಕತೆಗಳನ್ನು ಪೂರೈಸಲು ಗೌರಿ ನಾಯ್ಕ್ ಬಾವಿ ತೋಡುತ್ತಿದ್ದರು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಾವಿ ಅಗೆಯುವುದನ್ನು ನಿಲ್ಲಿಸಲಾಯಿತು. ಅಗೆದ ಸ್ಥಳದಲ್ಲಿ ಮಕ್ಕಳು ಬೀಳದಂತೆ ಅಧಿಕಾರಿಗಳು ಶೀಟ್‌ನಿಂದ ಮುಚ್ಚಿದ್ದಾರೆ.

ಕಳೆದ ಎರಡು ವಾರಗಳಿಂದ ಗೌರಿ ನಾಯ್ಕ ಗಣೇಶನಗರದ ಅಂಗನವಾಡಿ ಕೇಂದ್ರದ ಹಿಂದುಗಡೆ ಒಂಟಿಯಾಗಿ ಬಾವಿ ತೋಡುವ ಕಾರ್ಯದಲ್ಲಿ ತೊಡಗಿದ್ದರು. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಹಾಗೂ ಶಿರಸಿಯ ಶಿಶು ಅಭಿವೃದ್ಧಿ ಕಾರ್ಯಕ್ರಮ ಅಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com