ಶ್ರೀರಾಮನಿಗೆ ಅಪಮಾನ ಮಾಡಿಲ್ಲ; ಶಿಕ್ಷಕರ ವಜಾಕ್ಕೆ ಬಿಜೆಪಿ ಶಾಸಕರು ಒತ್ತಡ ಹಾಕಿದ್ದಾರೆ: ಜೆರೋಸಾ ಶಾಲೆಯ ಆಡಳಿತ ಮಂಡಳಿ!

ಜೆರೋಸಾ ಶಾಲೆಯ ಇಂಗ್ಲಿಷ್ ಶಿಕ್ಷಕಿ ಪ್ರಭಾ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇಂಟ್ ಜೆರೋಸಾ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಅವರು, ಶಿಕ್ಷಕಿಯನ್ನು ಕೆಲಸದಿಂದ ತೆಗೆದು ಹಾಕುವಂತೆ ಶಾಸಕ ವೇದವ್ಯಾಸ್ ಕಾಮತ್ ಶಾಲಾ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಶಾಸಕ ವೇದವ್ಯಾಸ ಕಾಮತ್
ಶಾಸಕ ವೇದವ್ಯಾಸ ಕಾಮತ್
Updated on

ಮಂಗಳೂರು: ಜೆರೋಸಾ ಶಾಲೆಯ ಇಂಗ್ಲಿಷ್ ಶಿಕ್ಷಕಿ ಪ್ರಭಾ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇಂಟ್ ಜೆರೋಸಾ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಅವರು, ಶಿಕ್ಷಕಿಯನ್ನು ಕೆಲಸದಿಂದ ತೆಗೆದು ಹಾಕುವಂತೆ ಶಾಸಕ ವೇದವ್ಯಾಸ್ ಕಾಮತ್ ಶಾಲಾ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಫೆಬ್ರುವರಿ 10ರಂದು ರವೀಂದ್ರನಾಥ ಟ್ಯಾಗೋರ್ ರಚಿಸಿದ ‘Work is Worship’ ಕವನವನ್ನು ಬೋಧಿಸುವಾಗ ಶಿಕ್ಷಕಿ ಪ್ರಭಾ ಅವರು ಹಿಂದೂ ಧರ್ಮ ಮತ್ತು ಪ್ರಧಾನಿ ವಿರುದ್ಧ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿ ನನ್ನ ಬಳಿ ದೂರು ನೀಡಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ನಂತರ ವಿಚಾರಣೆ ವೇಳೆ ಸಂಬಂಧಪಟ್ಟ ಶಿಕ್ಷಕಿ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದರು ಎಂದು ಮುಖ್ಯೋಪಾಧ್ಯಾಯಿನಿ ಅನಿತಾ ಹೇಳಿದರು.

ಕವಿತೆಯನ್ನು ವಿವರಿಸುವಾಗ ವಿದ್ಯಾರ್ಥಿಗಳಿಗೆ ಪ್ರಭಾ ಅವರು, ದೇವಾಲಯಗಳು, ಚರ್ಚ್‌ಗಳು ಮತ್ತು ಮಸೀದಿಗಳು ಕೇವಲ ಕಟ್ಟಡಗಳಾಗಿವೆ. ದೇವರು ಮಾನವ ಹೃದಯದಲ್ಲಿ ನೆಲೆಸಿದ್ದಾನೆ. ಆದ್ದರಿಂದ ದೇವರ ಹೆಸರಿನಲ್ಲಿ ಮನುಷ್ಯರನ್ನು ಕೊಲ್ಲಬಾರದು. ನಾವು ಕೆಲಸ ಮತ್ತು ಮನುಷ್ಯರನ್ನು ಗೌರವಿಸಬೇಕು ಮತ್ತು ಅವರಲ್ಲಿ ದೇವರನ್ನು ಕಾಣಬೇಕು. ದೇವರು ರಚನೆಗಳಲ್ಲಿ ಅಸ್ತಿತ್ವದಲ್ಲಿಲ್ಲ ಆದರೆ ಮಾನವ ಹೃದಯದಲ್ಲಿ ನೆಲೆಸಿದ್ದಾನೆ ಎಂದು ಹೇಳಿದ್ದರು ಎಂದರು.

ಆಡಿಯೋ ಸಂದೇಶವು ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದ ಶಾಲಾ ಆಡಳಿತ ಮಂಡಳಿಯು ಜಿಲ್ಲಾಡಳಿತವನ್ನು ಸಂಪರ್ಕಿಸಿದೆ. ಯಾವುದೇ ಅಹಿತಕರ ಘಟನೆಯಿಂದ ರಕ್ಷಣೆ ಕೋರಿ ವಿಷಯದ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯೋಪಾಧ್ಯಾಯಿನಿ ಅನಿತಾ ಹೇಳಿದರು. ವೈರಲ್ ಆಗಿರುವ ಮಹಿಳೆಯ ಆಡಿಯೋ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ಕೂಡ ನೀಡಲಾಗಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ಜೆರೋಸಾ ಘಟನೆ ಬೆನ್ನಲ್ಲೇ ಡಿಡಿಪಿಐ ವರ್ಗಾವಣೆ!

ಫೆಬ್ರವರಿ 12ರಂದು ಬಿಇಒ ಮತ್ತು ಇತರ ಅಧಿಕಾರಿಗಳು ಸಮಸ್ಯೆಗೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ನಡೆದದ್ದನ್ನು ವಿವರಿಸಿದರು. ಕೂಡಲೇ, ಶಾಸಕ ವೇದವ್ಯಾಸ್ ಕಾಮತ್ ಅವರು ಹಿಂದೂ ಕಾರ್ಯಕರ್ತರ ಗುಂಪಿನೊಂದಿಗೆ ಶಾಲೆಯ ಮುಂದೆ ಆಗಮಿಸಿ ಶಾಲೆಯ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ನಂತರ, ಬಿಇಒ ಮತ್ತು ಇತರ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿಭಟನಾ ಸ್ಥಳದಲ್ಲಿ ಶಾಸಕರನ್ನು ಭೇಟಿಯಾಗುವಂತೆ ಹೇಳಿದರು. ಅಲ್ಲಿಗೆ ಹೋದಾಗ, ಶಾಸಕರು ಶಿಕ್ಷಕಿಯನ್ನು ತಕ್ಷಣ ವಜಾಗೊಳಿಸುವಂತೆ ಒತ್ತಾಯಿಸಿದರು. ಇಲ್ಲದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವ ಬೆದರಿಕೆ ಹಾಕಿದರು. ಶಿಕ್ಷಣ ಸಂಸ್ಥೆಯ ನಿಯಮಗಳ ಪ್ರಕಾರ ನಾನು ವಿಚಾರಣೆಯಿಲ್ಲದೆ ಶಿಕ್ಷಕರನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಿದೆ. ಆದರೆ ಶಾಸಕರ ನೇತೃತ್ವದ ಗುಂಪು ಶಿಕ್ಷಕರನ್ನು ತಕ್ಷಣ ತೆಗೆದುಹಾಕುವಂತೆ ಒತ್ತಾಯಿಸಿದರು. ಬೇರೆ ದಾರಿಯಿಲ್ಲದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಆಕ್ರೋಶಿತಗೊಂಡಿದ್ದ ಗುಂಪನ್ನು ಚದುರಿಸಲು, ನಾನು ಪ್ರಭಾರನ್ನು ಕೆಲಸದಿಂದ ತೆಗೆದುಹಾಕುವ ಹೇಳಿಕೆಯನ್ನು ನೀಡುವಂತೆ ಒತ್ತಾಯಿಸಲಾಯಿತು ಎಂದು ಹೇಳಿದರು.

ಶಿಕ್ಷಕಿ ಪ್ರಭಾ ಅವರು ಜೆರೋಸಾ ಶಾಲೆಯಲ್ಲಿ ಐದು ವರ್ಷ ಸೇರಿದಂತೆ ಒಟ್ಟು 16 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ. ಅವರ ವಿರುದ್ಧ ಇದುವರೆಗೆ ಯಾವುದೇ ದೂರು ಬಂದಿಲ್ಲ ಎಂದು ಅವರು ಹೇಳಿದರು. ಈ ಘಟನೆಯ ಹಿಂದೆ ದೊಡ್ಡ ಪಿತೂರಿ ನಡೆಸಲಾಗಿದೆ. ಕನಿಷ್ಠ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಾಲೆಯ ಪ್ರತಿಷ್ಠೆಯನ್ನು ಹಾಳುಮಾಡಲು ಘಟನೆ / ಪ್ರತಿಭಟನೆಯನ್ನು ನಿರ್ವಹಿಸಲಾಗಿದೆ ಎಂದು ತೋರುತ್ತದೆ. ನಮ್ಮ ದೃಷ್ಟಿಕೋನದಲ್ಲಿ ನಾವು ಜಾತ್ಯತೀತರಾಗಿದ್ದೇವೆ. ಯಾವಾಗಲೂ ಎಲ್ಲಾ ವಿದ್ಯಾರ್ಥಿಗಳನ್ನು ಗೌರವಿಸುತ್ತೇವೆ. ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಯಾರನ್ನೂ ತಾರತಮ್ಯ ಮಾಡುವುದಿಲ್ಲ. ಪ್ರತಿ ವರ್ಷ ನಾವು ದೀಪಾವಳಿ, ಕ್ರಿಸ್‌ಮಸ್ ಮತ್ತು ಈದ್ ಅನ್ನು ಆಚರಿಸುತ್ತೇವೆ ಎಂದು ಪ್ರಕಟಣೆಯಲ್ಲಿ ಸೇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com