VIDEO | Karnataka CM Siddaramaiah leaves for Vidhan Sabha to present the state Budget 2024. pic.twitter.com/VssmhZUVV5
— Press Trust of India (@PTI_News) February 16, 2024
2024-25ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
— kannadaprabha (@KannadaPrabha) February 16, 2024
cabinet approves state budget 2024: cm Siddaramaiah budget speech shortly#Siddaramaiah #ಸಿದ್ದರಾಮಯ್ಯ #ಸಂಪುಟಸಭೆ #cabinetmeeting #Statebudget2024 #ರಾಜ್ಯಬಜೆಟ್2024 #KarnatakaBudget2024 #ಕರ್ನಾಟಕಬಜೆಟ್2024…
2024-25ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 15ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
— kannadaprabha (@KannadaPrabha) February 16, 2024
CM siddaramaiah presents state budget 2023-24#Siddaramaiah #ಸಿದ್ದರಾಮಯ್ಯ #Statebudget2024 #ರಾಜ್ಯಬಜೆಟ್2024 #KarnatakaBudget2024 #ಕರ್ನಾಟಕಬಜೆಟ್2024 @XpressBengaluru https://t.co/3hcYXhV7V7
2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆb
— kannadaprabha (@KannadaPrabha) February 16, 2024
state budget 2024-25: CM Siddaramaiah presents Rs.3.71 lakh crore budget#Siddaramaiah #ಸಿದ್ದರಾಮಯ್ಯ #Statebudget2024 #ರಾಜ್ಯಬಜೆಟ್2024 #KarnatakaBudget2024 #ಕರ್ನಾಟಕಬಜೆಟ್2024 @XpressBengaluru…
ಕರ್ನಾಟಕ ಬಜೆಟ್ 2023-24: ಯಾವ ಇಲಾಖೆಗೆ ಎಷ್ಟು ಅನುದಾನ?
— kannadaprabha (@KannadaPrabha) February 16, 2024
Karnataka budget 2024-2025: Checkout funds allocation in different sectors#Siddaramaiah #ಸಿದ್ದರಾಮಯ್ಯ #Karnataka #ಕರ್ನಾಟಕ #ಅನುದಾನ #Allocation #Statebudget2024 #ರಾಜ್ಯಬಜೆಟ್2024 #KarnatakaBudget2024 #ಕರ್ನಾಟಕಬಜೆಟ್2024…
2024-25ನೇ ಸಾಲಿನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಖರ್ಚು?
ಸಾಲ ತೀರಿಕೆ-18 ಪೈಸೆ, ನೀರು ಪೂರೈಕೆ ಮತ್ತು ನೈರ್ಮಲ್ಯ – 3 ಪೈಸೆ, ಶಿಕ್ಷಣ-11ಪೈಸೆ, ಆರೋಗ್ಯ-4 ಪೈಸೆ, ಇತರೆ ಸಾಮಾಜಿಕ ಸೇವೆಗಳು- 3 ಪೈಸೆ, ಕೃಷಿ ನೀರಾವರಿ, ಮತ್ತು ಗ್ರಾಮೀಣಾಭಿವೃದ್ಧಿ- 14ಪೈಸೆ, ಇತರೆ ಆರ್ಥಿಕ ಸೇವೆಗಳು- 15ಪೈಸೆ, ಸಮಾಜ ಕಲ್ಯಾಣ-15 ಪೈಸೆ, ಇತರೆ ಸಾಮಾನ್ಯ ಸೇವೆಗಳು- 17 ಪೈಸೆ.
ಶಿಕ್ಷಣ ಕ್ಷೇತ್ರ
ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್ ನೀಡಲಾಗುವುದು.
ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಫ್ರೀ ಕರೆಂಟ್ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು ಇಡಲಾಗುವುದು. ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನೀರಾವರಿಗೆ ಸಿಎಂ ಕೊಡುಗೆ
ಮೇಕೆದಾಟು ಯೋಜನೆ ಶೀಘ್ರವೇ ಜಾರಿಗೆ ಕ್ರಮ
ಎತ್ತಿನಹೊಳೆ ಯೋಜನೆಯ ಎಲ್ಲ ಲಿಫ್ಟ್ ಕಾಮಗಾರಿ ಪೂರ್ಣಗೊಳಿಸಲು ತೀರ್ಮಾನ
ಕಳಸಾ-ಬಂಡೂರಿ ಯೋಜನೆ ಜಾರಿಯ ಅಡೆತಡೆ ನಿವಾರಣೆ
ಆರೋಗ್ಯ ಕ್ಷೇತ್ರ
ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೊಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದೊಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸುವುದಾಗಿ ಇಂದಿನ ಬಜೆಟ್ನಲ್ಲಿ ಘೋಷಿಸಲಾಗಿದೆ.
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮ್ಯಾಮೊಗ್ರಫಿ ಯಂತ್ರಗಳ ಅಳವಡಿಕೆ, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಉಡುಪಿ, ಕೋಲಾರ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪಸ್ಕೊಪಿ ಉಪಕರಣಗಳ ಖರೀದಿ 21 ಕೋಟಿ ರೂಪಾಯಿ ಅನುದಾನ.
ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಹಬ್ ಅಂಡ್ ಸ್ಪೋಕ್ ಮಾದರಿಯಲ್ಲಿ ವಿಸ್ತರಿಸುವ ಮೂಲಕ ಸ್ಟೆಮಿ (STEMI- ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ ಸ್ಟೆಮಿ ಹಾಗೂ ಸ್ಟ್ರೋಕ್ ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂಪಾಯಿಗಳನ್ನು ಘೋಷಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.
2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ.
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.
ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.
ನಮ್ಮ ಮಿಲೆಟ್ ಯೋಜನೆ ಘೋಷಣೆ
ರಾಜ್ಯ ಸರ್ಕಾರವು ಸಿರಿಧಾನ್ಯಗಳ ಉತ್ಪಾದನೆಗೆ ಹೊಸ ಯೋಜನೆ ಘೋಷಣೆ ಮಾಡಿದೆ. ಬಜೆಟ್ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮಿಲೆಟ್ ಯೋಜನೆ ಘೋಷಣೆ ಮಾಡಿದ್ದಾರೆ.
Advertisement