ಬೆಂಗಳೂರು: ಬಜೆಟ್ ಕಾರ್ಯ ಹಾಗೂ ನಿರಂತರ ಜಿಲ್ಲಾ ಪ್ರವಾಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರಾಗ್ಯ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆ ವಿಶ್ರಾಂತಿ ಪಡೆಯಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳು ಕಳೆದ ಕೆಲವು ದಿನಗಳಿಂದ ಬಜೆಟ್ ಸೇರಿದಂತೆ ಬಿಡುವಿಲ್ಲದ ಕೆಲಸದಲ್ಲಿ ತೊಡಗಿಕೊಂಡಿದ್ದರು. ಇದೀಗ ವಿಶ್ರಾಂತಿ ಪಡೆಯಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ವಿಧಾನಮಂಡದಲ್ಲಿ ಅಧಿವೇಶನ ನಡೆಯುತ್ತಿದ್ದು, ಅನಾರೋಗ್ಯ ಕಾರಣದಿಂದಾಗಿ ಸಿಎಂ ಅಧಿವೇಶನದಿಂದ ಹೊರಗುಳಿದಿದ್ದಾರೆ.
ಫೆ.15 ರಂದು ಮುಖ್ಯಮಂತ್ರಿಗಳು ಸತತ 3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮಾಡಿದ್ದರು. ನಂತರ 2 ದಿನ ನಿರಂತರ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ಹಿನ್ನೆಲೆ ಅನಾರೋಗ್ಯ ಎದುರಾಗಿದೆ ಎನ್ನಲಾಗಿದೆ.
Advertisement