ರಾಹುಲ್ ಗಾಂಧಿ ಸಲಹೆಯಂತೆ ಕರ್ನಾಟಕದ ಹಣ ದುರುಪಯೋಗ: ಬಿ ವೈ ವಿಜಯೇಂದ್ರ ಆರೋಪ

ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವಯನಾಡು ಮೂಲದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.
ಬಿ ವೈ ವಿಜಯೇಂದ್ರ-ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
ಬಿ ವೈ ವಿಜಯೇಂದ್ರ-ರಾಹುಲ್ ಗಾಂಧಿ(ಸಂಗ್ರಹ ಚಿತ್ರ)

ಬೆಂಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವಯನಾಡು ಮೂಲದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, 15 ಲಕ್ಷ ರೂಪಾಯಿ ಪರಿಹಾರ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ಖಂಡನೀಯ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

15 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದೇವೆಂದು ಅರಣ್ಯ ಸಚಿವರು ಪತ್ರ ಬರೆದಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ಅರಣ್ಯ ಸಚಿವರು ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆ ಪರಿಹಾರ ನೀಡಲಾಗಿದೆ ಎಂದಿದ್ದಾರೆ. ಮಾನವೀಯ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪರಿಹಾರ ನೀಡಲಿ ಎಂದು ವಿಜಯೇಂದ್ರ ಹೇಳಿದ್ದಾರೆ.

ಕಾಡಾನೆ ದಾಳಿಯಿಂದ ಕೇರಳದ ವಯನಾಡು ಜಿಲ್ಲೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದರು. ಮೃತನ ಕುಟುಂಬಕ್ಕೆ ನೆರವಾಗುವಂತೆ ‘ಕೈ’ ನಾಯಕ ರಾಹುಲ್‌ ಗಾಂಧಿ ಸಲಹೆ ನೀಡಿದ್ದರು. ಅದರ ಮೇರೆಗೆ ಕರ್ನಾಟಕದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಅಕ್ರಮವಾಗಿ ಹಣ ಮಂಜೂರು ಮಾಡಿದ್ದು ರಾಜ್ಯದ ಜನರಿಗೆ ದ್ರೋಹ ಅಲ್ಲವೇ ಎಂದು ವಿಜಯೇಂದ್ರ ಕೇಳಿದ್ದಾರೆ.

ಕಳೆದ ಮುಂಗಾರಿನಲ್ಲಿ ಸಾಕಷ್ಟು ಮಳೆಯಾಗದೆ ಕರ್ನಾಟಕದಲ್ಲಿ ಬರಗಾಲದಿಂದ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸುತ್ತಿರುವುದಕ್ಕೆ ಸಿಎಂ ಹಾಗೂ ಸಚಿವರು ಹೊಣೆ ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com