ಬೆಂಗಳೂರು: ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ಕಟ್ಟಡ ಅವಶೇಷಗಳ ರಾಶಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

506.8 ಎಕರೆ ವಿಸ್ತೀರ್ಣದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವುದರಿಂದ ಹಲವು ಅಪಾಯಗಳಿಗೆ ಎಡೆಮಾಡಿಕೊಟ್ಟಿದೆ.
ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಸುರಿದಿರುವ ಕಟ್ಟಡ ಅವಶೇಷಗಳು
ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಸುರಿದಿರುವ ಕಟ್ಟಡ ಅವಶೇಷಗಳು
Updated on

ಬೆಂಗಳೂರು: 506.8 ಎಕರೆ ವಿಸ್ತೀರ್ಣದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವುದರಿಂದ ಹಲವು ಅಪಾಯಗಳಿಗೆ ಎಡೆಮಾಡಿಕೊಟ್ಟಿದೆ. ಸಿಸಿಟಿವಿ ಅಳವಡಿಸಿ ಕೆರೆಯ ಸುತ್ತ ಬೇಲಿ ಹಾಕುವ ಕಾಮಗಾರಿಯನ್ನು ಇಲಾಖೆ ಕೈಗೆತ್ತಿಕೊಳ್ಳಬೇಕು ಎಂದು ಆಕ್ರೋಶಗೊಂಡ ನಿವಾಸಿಗಳು ಆಗ್ರಹಿಸಿದ್ದಾರೆ. ಈ ಹಿಂದೆ ಬಡಾವಣೆಗಳ ಕೊಳಚೆ ನೀರನ್ನು ನೇರವಾಗಿ ಕೆರೆಗೆ ಬಿಡುತ್ತಿರುವ ಬಗ್ಗೆ ವರದಿಯಾಗಿತ್ತು.

ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜಣ್ಣ ಮಾತನಾಡಿ, 'ಕೆರೆ ಆವರಣದಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಇಲಾಖೆ ಗಮನಕ್ಕೆ ಬಂದಿದ್ದು, ಬೇಲಿ ಹಾಕುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. 'ಎರಡು ಪಂಚಾಯಿತಿಗಳು ಮತ್ತು ಬಿಬಿಎಂಪಿ ವ್ಯಾಪ್ತಿಯನ್ನು ಒಳಗೊಂಡಿರುವ ಕೆರೆಯ 10 ಕಿಮೀ ವ್ಯಾಪ್ತಿಯಲ್ಲಿ ಬೇಲಿ ಹಾಕುವ ಕಾರ್ಯವನ್ನು ಪೂರ್ಣಗೊಳಿಸಬೇಕು. ತಹಸೀಲ್ದಾರ್ ಆದೇಶ ಮತ್ತು ಸರ್ವೆ ಆಧರಿಸಿ 3 ಕಿ.ಮೀ ಬೇಲಿ ಹಾಕಲಾಗಿದೆ. ಇನ್ನೊಂದು ತಿಂಗಳಲ್ಲಿ ಇಲಾಖೆ ವತಿಯಿಂದ ಎಲ್ಲ ಬೇಲಿ ಹಾಕುವ ಕಾಮಗಾರಿ ಪೂರ್ಣಗೊಳಿಸಿ ಕೆರೆಯ ರಕ್ಷಣೆಗೆ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಇಲಾಖೆ ಕಾರ್ಯಪಾಲಕ ಅಭಿಯಂತರ ರವೀಂದ್ರನಾಥ್ ಮಾತನಾಡಿ, ಕೆರೆಯನ್ನು ಪುರಸಭೆಗೆ ಹಸ್ತಾಂತರಿಸಲು ಚಿಂತನೆ ನಡೆಸಲಾಗಿದ್ದು, ಜಲಾನಯನ ಪುನಶ್ಚೇತನಕ್ಕೆ ಸಾಕಷ್ಟು ಹಣ ದೊರೆಯಲಿದೆ ಎಂದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೆರೆಗೆ 15 ಎಂಎಲ್‌ಡಿ ಕೊಳಚೆ ನೀರು ಸಂಸ್ಕರಣಾ ಘಟಕ ಅಳವಡಿಸಲಾಗಿದ್ದರೂ, ಕೊಳಚೆ ನೀರು ನೇರವಾಗಿ ಕೆರೆ ಸೇರುತ್ತಿದೆ. ಇದನ್ನು ಸರಿಪಡಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿಗೆ ಪತ್ರ ಬರೆಯಲಾಗಿದೆ ಎಂದು ಅವರು ಹೇಳಿದರು.

ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಸುರಿದಿರುವ ಕಟ್ಟಡ ಅವಶೇಷಗಳು
ಬೆಂಗಳೂರು: ಅಕ್ರಮವಾಗಿ ರಸ್ತೆ ನಿರ್ಮಿಸಲು ಪಟ್ಟಂದೂರು ಅಗ್ರಹಾರ ಕೆರೆ ಬಫರ್ ಝೋನ್ ಒತ್ತುವರಿ

ಬೆಂಗಳೂರಿನ ಎರಡನೇ ಅತಿ ದೊಡ್ಡ ಜಲಮೂಲವಾಗಿರುವ ಕೆರೆಯಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಸರ್ಕಾರ ಸಿಸಿಟಿವಿಗಳನ್ನು ಅಳವಡಿಸಬೇಕು ಎಂದು ಕೆರೆ ಕಾರ್ಯಕರ್ತರು ಮತ್ತು ನಿವಾಸಿಗಳು ಒತ್ತಾಯಿಸಿದ್ದಾರೆ.

'ಹೆಚ್ಚಿನ ಕಾರ್ಯಕರ್ತರು ಮತ್ತು ನಿವಾಸಿಗಳು ಕೆಲಸದ ಮೇಲೆ ಹೊರಗಿದ್ದಾರೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಕೆಆರ್ ಪುರಂ ಹಾಗೂ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವವರು ರಾತ್ರಿ ಅಥವಾ ಮಧ್ಯಾಹ್ನದ ವೇಳೆಯಲ್ಲಿ ಅವಶೇಷಗಳನ್ನು ತಂದು ಸುರಿದು ಪರಾರಿಯಾಗುತ್ತಿದ್ದಾರೆ’ ಎಂದು ನಿವಾಸಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com