ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನವರೆಗೆ ವಿಸ್ತರಣೆ

ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಬುಧವಾರ ಅನುಮೋದನೆ ನೀಡಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್
ವಂದೇ ಭಾರತ್ ಎಕ್ಸ್‌ಪ್ರೆಸ್
Updated on

ಮಂಗಳೂರು: ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಬುಧವಾರ ಅನುಮೋದನೆ ನೀಡಿದೆ.

ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕ(ಕೋಚಿಂಗ್) ವಿವೇಕ್ ಕುಮಾರ್ ಸಿನ್ಹಾ ಅವರ ಪ್ರಕಟಣೆಯ ಪ್ರಕಾರ, ಮಂಗಳೂರು-ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ. 20631) ಮಂಗಳೂರಿನಿಂದ ಬೆಳಗ್ಗೆ 6.15 ಕ್ಕೆ ಹೊರಟು, ಮಧ್ಯಾಹ್ನ 3.05ಕ್ಕೆ ತಿರುವನಂತಪುರಂ ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನ ಈ ವಂದೇ ಭಾರತ್ ರೈಲು ಸಂಚರಿಸಲಿದೆ.

ತಿರುವನಂತಪುರಂ-ಮಂಗಳೂರು ಎಕ್ಸ್‌ಪ್ರೆಸ್(ರೈಲು ಸಂಖ್ಯೆ 20632) ರೈಲು ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ಮಧ್ಯ ರಾತ್ರಿ 12.40 ಕ್ಕೆ ಮಂಗಳೂರು ತಲುಪಲಿದೆ. ಈ ಮಾರ್ಗದಲ್ಲಿ ರೈಲು ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮೇನ್, ತಿರೂರ್, ಶೋರನೂರು, ತ್ರಿಶೂರ್, ಎರ್ನಾಕುಲಂ, ಆಲಪ್ಪುಳ ಮತ್ತು ಕೊಲ್ಲಂನಲ್ಲಿ ನಿಲ್ಲುತ್ತದೆ.

ವಂದೇ ಭಾರತ್ ಎಕ್ಸ್‌ಪ್ರೆಸ್
ಕೇಂದ್ರ ಬಜೆಟ್ 2024: ರೈಲ್ವೆಗೆ ದೊಡ್ಡ ಕೊಡುಗೆ, 40 ಸಾವಿರ ಸಾಮಾನ್ಯ ಬೋಗಿಗಳು ವಂದೇ ಭಾರತ್ ದರ್ಜೆಗೆ!

ಈ ರೈಲುಗಳ ಪ್ರಾಥಮಿಕ ನಿರ್ವಹಣೆಯು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸಿನ್ಹಾ ಅವರು ತಿಳಿಸಿದ್ದಾರೆ.

ಮಂಗಳೂರಿನವರೆಗೆ ರೈಲನ್ನು ವಿಸ್ತರಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಅದನ್ನು ಅನುಮೋದಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com