ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. ನೆರವು: ಈಶ್ವರ ಖಂಡ್ರೆ

ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಚಿವ ಈಶ್ವರ್ ಖಂಡ್ರೆ ಮತ್ತಿತರರು
ಸಚಿವ ಈಶ್ವರ್ ಖಂಡ್ರೆ ಮತ್ತಿತರರು
Updated on

ಬೆಂಗಳೂರು: ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಲಾಂಟನಾದಿಂದ ತಯಾರಿಸಿದ ಪೀಠೋಪಕರಣ, ಅಲಂಕಾರಿಕ ವಸ್ತುಗಳು ಮತ್ತು ವನ್ಯಜೀವಿ ಆಕೃತಿಗಳಿಗೆ ದೇಶದಾದ್ಯಂತ ಅಷ್ಟೇ ಅಲ್ಲ ವಿದೇಶದಲ್ಲಿಯೂ ಬೇಡಿಕೆ ಸೃಷ್ಟಿಸಲು ವ್ಯಾಪಕ ಪ್ರಚಾರ ನೀಡುವ ಮತ್ತು ಆನ್ ಲೈನ್ ಮೂಲಕ ಮಾರಾಟ ಮಾಡಲು ವೇದಿಕೆ ಕಲ್ಪಿಸಲು ಕ್ರಮ ವಹಿಸುವ ಸಾಧ್ಯತೆಗಳ ಕುರಿತಂತೆ ವರದಿ ಸಲ್ಲಿಸಲು ಸ್ಥಳದಲ್ಲಿ ಹಾಜರಿದ್ದ ಹಿರಿಯ ಐ.ಎಫ್.ಎಸ್ ಅಧಿಕಾರಿ ಕುಮಾರ್ ಪುಷ್ಕರ್ ಅವರಿಗೆ ಸೂಚನೆ ನೀಡಿದರು.

ಬೆಂಗಳೂರಿನ ಲಾಲ್ ಬಾಗ್ ನಲ್ಲಿಂದು ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದ್ದು, ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ, ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಸಚಿವ ಈಶ್ವರ್ ಖಂಡ್ರೆ ಮತ್ತಿತರರು
ಮಾನವ-ಪ್ರಾಣಿ ಸಂಘರ್ಷ ಪರಿಹಾರಕ್ಕೆ ರೇಲ್ ಬ್ಯಾರಿಕೇಡ್ ಅಗತ್ಯ: ಸಚಿವ ಈಶ್ವರ ಖಂಡ್ರೆ

ಲಾಂಟನಾ ವಿದೇಶದಿಂದ ನಮ್ಮ ದೇಶಕ್ಕೆ ಆಗಮಿಸಿದ ಕಳೆಯಾಗಿದೆ. ಇದು ಕಾಡನ್ನು ರಕ್ತ ಬೀಜಾಸುರನಂತೆ ಆವರಿಸುತ್ತಿದ್ದು ಇದನ್ನು ವೈಜ್ಞಾನಿಕವಾಗಿ ನಿರ್ಮೂಲನೆ ಮಾಡುವ ಅಗತ್ಯವಿದೆ. ಲಾಂಟನಾವನ್ನು ಹೆಚ್ಚಿನ ಪ್ರಮಾಣದಲ್ಲಿ ಬುಡಸಮೇತ ತೆಗೆದು ಕಲಾಕೃತಿ ರಚಿಸಲು ಬುಡಕಟ್ಟು ಮತ್ತು ಆದಿವಾಸಿಗಳಿಗೆ ಸೂಕ್ತ ತರಬೇತಿ ನೀಡಿದರೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ಲಭಿಸುತ್ತದೆ. ಲಾಂಟನಾ ಸಮಸ್ಯೆಯೂ ಪರಿಹಾರವಾಗುತ್ತದೆ ಎಂದು ಹೇಳಿದರು.

ಸಹಬಾಳ್ವೆ ಅಗತ್ಯ: ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಮನುಷ್ಯನಂತೆಯೇ ಬದುಕುವ ಹಕ್ಕಿದೆ. ಕಾಡಿನಂಚಿನಲ್ಲಿದ್ದ ನಮ್ಮ ಪೂರ್ವಿಕರು ಸೂಕ್ಷ್ಮ ಸಂವೇದಿಗಳಾಗಿದ್ದರು. ಅವರು ವನ್ಯಜೀವಿಗಳೊಂದಿಗೆ ಸಹಬಾಳ್ವೆಯಿಂದ ಬದುಕುವುದನ್ನು ಅರಿತಿದ್ದರು. ಇಂದಿನ ಪೀಳಿಗೆಗೆ ಈ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com