ಬೆಂಗಳೂರು: ಬನಶಂಕರಿಯಲ್ಲಿ ವೃದ್ಧ ದಂಪತಿ ಆತ್ಮಹತ್ಯೆ

ಬನಶಂಕರಿ 3ನೇ ಹಂತದ ಇಟ್ಟಮಡು ಮುಖ್ಯರಸ್ತೆಯ ಕೃಷ್ಣಯ್ಯ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ 84 ವರ್ಷದ ಪುರುಷ ಮತ್ತು ಅವರ 78 ವರ್ಷದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ
ಆತ್ಮಹತ್ಯೆ ತಡೆ ಸಹಾಯವಾಣಿ
Updated on

ಬೆಂಗಳೂರು: ಬನಶಂಕರಿ 3ನೇ ಹಂತದ ಇಟ್ಟಮಡು ಮುಖ್ಯರಸ್ತೆಯ ಕೃಷ್ಣಯ್ಯ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ 84 ವರ್ಷದ ಪುರುಷ ಮತ್ತು ಅವರ 78 ವರ್ಷದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಕೃಷ್ಣ ನಾಯ್ಡು ಹಾಗೂ ಪತ್ನಿ ಸರೋಜಮ್ಮ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಸ್ವಂತ ಕಟ್ಟಡದ ಮೂರನೇ ಮಹಡಿಯ ಟೆರೇಸ್‌ನಲ್ಲಿರುವ ಕೊಠಡಿಯಲ್ಲಿ ತಂಗಿದ್ದರು.

ನಾಯ್ಡು ಅವರು ಕಿಟಕಿಯ ಗ್ರಿಲ್‌ಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರ ಪತ್ನಿ ಸೀರೆಯಿಂದ ಮತ್ತೊಂದು ಕಿಟಕಿಯ ಗ್ರಿಲ್‌ಗೆ ನೇಣು ಹಾಕಿಕೊಂಡಿದ್ದಾರೆ. ಅವರ ಮಗ ಅಶೋಕ್ ಕುಮಾರ್ ತನ್ನ ಹೆಂಡತಿಯೊಂದಿಗೆ ನೆಲ ಮಹಡಿಯಲ್ಲಿ ವಾಸಿಸುತ್ತಿದ್ದ. ದಂಪತಿಯ ಮಗಳು ಮದುವೆಯಾಗಿ ಪ್ರತ್ಯೇಕವಾಗಿ ನೆಲೆಸಿದ್ದಾಳೆ.

ಆತ್ಮಹತ್ಯೆ ತಡೆ ಸಹಾಯವಾಣಿ
ರಾಮನಗರ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ

ಕುಟುಂಬ ಆಂಧ್ರಪ್ರದೇಶದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದಾರೆ. ಪೊಲೀಸರಿಗೆ ಕೋಣೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಬೆಳಿಗ್ಗೆ 5.30 ರ ಸುಮಾರಿಗೆ ಅಶೋಕ್ ಅವರ ಪತ್ನಿ ನೀರು ಕುಡಿಯಲು ಟೆರೇಸ್‌ಗೆ ಹೋದಾಗ ತನ್ನ ಅತ್ತೆ ಕಿಟಕಿ ಗ್ರಿಲ್‌ಗೆ ನೇತಾಡುತ್ತಿರುವುದನ್ನು ನೋಡಿದರು. ಕೂಡಲೇ ಪತಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದಂಪತಿಗಳು ತಮ್ಮ ಪುತ್ರನೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ದಂಪತಿಯ ಮಗಳು ಪದೇ ಪದೇ ಜಗಳವಾಡುವುದನ್ನು ವಿರೋಧಿಸಿ ತನ್ನ ಸಹೋದರನೊಂದಿಗೆ ಜಗಳವಾಡಿದ್ದಳು. ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com