ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೊಸ ದರೋಜಿ ಸಮೀಪ ನಿಂತಿದ್ದ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ, ಇಬ್ಬರು ಮಕ್ಕಳು ಮೃತ ಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬುನಾಥ ಹಳ್ಳಿಯ 45 ವರ್ಷದ ವೆಂಕಟೇಶ್, 8 ವರ್ಷದ ಆಶಾ ಮತ್ತು 6 ವರ್ಷದ ಅಖಿಲಾ ಎಂದು ಗುರುತಿಸಲಾಗಿದೆ.
ಬೈಕ್ ನಿಂತ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಮೃತ ಪಟ್ಟಿದ್ದಾರೆ. ಜಂಬಕ್ಕ ಮತ್ತು ಸರಸ್ವತಿಗೆ ಗಾಯಗಳಾಗಿದ್ದು ವಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement