ಹಾವೇರಿ: ಲಾರಿ ಡಿಕ್ಕಿ; ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ದೇಹ ಛಿದ್ರ ಛಿದ್ರ; ಮಗುವಿನ‌‌ ಸ್ಥಿತಿ ಗಂಭೀರ

ಬೈಕ್​ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಾವೇರಿ: ಬೈಕ್​ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದರು. ಮೊಟೇಬೆನ್ನೂರು ಬಳಿ ವೇಗವಾಗಿ ಬಂದ ಲಾರಿ ಬೈಕ್ ಗೆ ಹಿಂಬದಿಯಿಂದ ಗುದ್ದಿದ್ದು ಅಲ್ಲದೆ ಅವರ ದೇಹಗಳ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹೆಣ್ಣು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಸಂಗ್ರಹ ಚಿತ್ರ
ಕರ್ನಾಟಕ ಸರ್ಕಾರದ 15 ಲಕ್ಷ ರೂಪಾಯಿ ಆರ್ಥಿಕ ನೆರವು ನಮಗೆ ಬೇಡ: ಕೇರಳದ ಮೃತ ಅಜೀಶ್ ಕುಟುಂಬ!

ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಗುದ್ದಿದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿದೆ. ಮೃತರನ್ನು ಹಾವೇರಿಯ ನಾಗೇಂದ್ರನಮಟ್ಟಿ ನಿವಾಸಿಗಳಾದ 34 ವರ್ಷದ ಆಸೀಫ್‌ವುಲ್ಲಾ ಮಲ್ಲಾಡದ, 27 ವರ್ಷದ ಅಫ್ರಿನ್‌ಬಾನು ಮಲ್ಲಾಡದ ಹಾಗೂ 6 ವರ್ಷದ ಪುತ್ರ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com