ಮುರುಘಾ ಮಠದ ಆಡಳಿತ ನಿರ್ವಹಣೆಗೆ 3 ದಿನದಲ್ಲಿ ಸಮಿತಿ ರಚಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಮಠದ ಆಡಳಿತಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, ಮಠದ ವ್ಯವಹಾರಗಳ ಮೇಲ್ವಿಚಾರಣೆಗಾಗಿ ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ/ಚಿತ್ರದುರ್ಗ: ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಮಠದ ಆಡಳಿತಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, ಮಠದ ವ್ಯವಹಾರಗಳ ಮೇಲ್ವಿಚಾರಣೆಗಾಗಿ ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮುರುಘಾ ಮಠದ ವ್ಯವಹಾರಗಳ ಮೇಲ್ವಿಚಾರಣೆಗೆ ಸಮಿತಿಯನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಫೆ.27) ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೊಟ್ಟ ನಿರ್ದೇಶನದಲ್ಲಿ, ಯಾವುದೇ ಆರೋಪಿ ವ್ಯಕ್ತಿ ಸಮಿತಿಯ ಭಾಗವಾಗಬಾರದು ಎಂದು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಸುಪ್ರೀಂಕೋರ್ಟ್
ಮುರುಘಾ ಮಠ. ವಿದ್ಯಾಪೀಠದ ಆಡಳಿತ ಅಧಿಕಾರ ಶಿವಮೂರ್ತಿ ಶರಣಗೆ ಹಸ್ತಾಂತರ

ಅದೇ ರೀತಿ, ಎರಡು ವಾರಗಳಲ್ಲಿ ಸರ್ಕಾರದಿಂದ ತ್ವರಿತ ಪ್ರತಿಕ್ರಿಯೆ ನೀಡಬೇಕಾದ ಮಹತ್ವವನ್ನು ಕೂಡ ನ್ಯಾಯಾಲಯ ಒತ್ತಿಹೇಳಿದೆ. ಇದಲ್ಲದೆ, ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಆರೋಪಿ ಶಿವಮೂರ್ತಿ ಮುರುಘಾ ಶರಣರು ಮುರುಘಾ ಮಠ ಮತ್ತು ಎಸ್‌ಜೆಎಂ ವಿದ್ಯಾಪೀಠದ ಮುಖ್ಯಸ್ಥರಾಗುವುದನ್ನು ನ್ಯಾಯಾಲಯ ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಮಾಜಿ ಸಚಿವ ಮತ್ತು ಮಠದ ಭಕ್ತ ಜಿ.ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮುರುಘಾ ಶರಣರು ಮಠದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ಬಂಧ ಹೇರಿದೆ ಮತ್ತು ಮುಂದಿನ ಮೂರು ದಿನಗಳಲ್ಲಿ ಸಮಿತಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಅರ್ಜಿದಾರರ ಪರ ವಕೀಲೆ ಅಪರ್ಣಾ ಭಟ್ ಹೇಳಿದರು.

ಧಾರ್ಮಿಕ ಸಂಸ್ಥೆಗಳ (ದುರುಪಯೋಗ ತಡೆಗಟ್ಟುವಿಕೆ) ಕಾಯ್ದೆ, 1988 ರ ಪ್ರಕಾರ, ಸುಪ್ರೀಂ ಕೋರ್ಟ್ ಆದೇಶವನ್ನು ಅಂಗೀಕರಿಸಿತು. ಮುಂದಿನ 15 ದಿನಗಳಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು ಎಂದು ಅವರು ಹೇಳಿದರು.

ಸುಪ್ರೀಂಕೋರ್ಟ್
ಮುರುಘಾ ಮಠ. ವಿದ್ಯಾಪೀಠದ ಆಡಳಿತ ಅಧಿಕಾರ ಶಿವಮೂರ್ತಿ ಶರಣಗೆ ಹಸ್ತಾಂತರ

ಏನಿದು ಪ್ರಕರಣ?

ಪೋಕ್ಸೋ ಮತ್ತು ಜಾತಿ ನಿಂದನೆ ಆರೋಪದಲ್ಲಿ ಜೈಲು ಸೇರಿದ್ದ ಶಿವಮೂರ್ತಿ ಮುರುಘಾ ಶರಣರು, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯಡಿ ಮಠದ ಆಡಳಿತ ನಿರ್ವಹಣೆ ಮಾಡುವುದಕ್ಕೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಸೆಷನ್ಸ್ ಕೋರ್ಟ್ ಆದೇಶಿಸಿತ್ತು. ಈ ನಡುವೆ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಹೈಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಮಠ ಮಾನ್ಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಅಲ್ಲದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997ಕ್ಕೆ ರಾಜ್ಯ ಸರ್ಕಾರ 2011ರಲ್ಲೇ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯನುಸಾರ ಯಾವುದೇ ಮಠ, ಮಠಕ್ಕೆ ಹೊಂದಿಕೊಂಡ ದೇಗುಲಗಳನ್ನು ಶಾಸನದಿಂದ ಹೊರಗಿಡಲಾಗಿದೆ.

ಈ ಕುರಿತ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿಗೂ ಸಲ್ಲಿಸಲಾಗಿದೆ ಎಂಬ ಅಂಶವನ್ನು ತೀರ್ಪಿನಲ್ಲಿ ಉಲ್ಲೇಖಿಸಿದ್ದ ನ್ಯಾಯಪೀಠ, ಸರ್ಕಾರವು ಮಠದ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಬರುವುದಿಲ್ಲ. ಶಾಸನಯುಕ್ತ ಅಧಿಕಾರ ಇದ್ದರೆ ಮಾತ್ರವೇ ಮಧ್ಯಪ್ರವೇಶ ಮಾಡಬಹುದು. ಹೀಗಾಗಿ, ಈ ಪ್ರಕರಣದಲ್ಲಿ ಆಡಳಿತಾಧಿಕಾರಿ ನೇಮಕಾತಿಯನ್ನು ಅಸಿಂಧುಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com