ಬೀದರ್: ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ದುರಂತ ಸಂಭವಿಸಿದೆ
ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು.
ಈ ವೇಳೆ ಟ್ರಕ್-ಟಾಟಾ ಏಸ್ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement